12:15 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಶರಣು: ತಂದೆಯ ಜತೆ ಠಾಣೆಗೆ ಬಂದ ಆರೋಪಿ

18/10/2023, 23:08

ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.


ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕಮಲೇಶ್ ಬಲದೇವ್ ಕುದ್ರೋಳಿ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಯುವತಿ ಹಾಗೂ ಮಕ್ಕಳಿದ್ದ ಗುಂಪಿಗೆ ಕಾರು ನುಗ್ಗಿಸಿದ್ದ. ಇದರ ಪರಿಣಾಮ ಸುರತ್ಕಲ್ ಸಮೀಪದ ಕಾನ ಬಾಳದ ನಿವಾಸಿ ಗಂಗಾಧರ ಅವರ ಪುತ್ರಿ 23ರ ಹರೆಯದ ರೂಪಶ್ರೀ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪ್ರಾಪ್ತ ಬಾಲಕಿಯರು ಸೇರಿದಂತೆ ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ ಕಮಲೇಶ್ ಬಲದೇವ್ ಹೊಂಡಾ ಶೋ ರೂಮ್ ಬಳಿ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದ. ಮನೆಯಲ್ಲಿ ವಿಷಯವೆಲ್ಲ ಹೇಳಿದ ಬಳಿಕ ತಂದೆ ಎಚ್.ಎಂ. ಬಲದೇವ್ ಜತೆ ಬಂದು ಪಶ್ಚಿಮ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು