4:45 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಫುಟ್ ಪಾತ್ ನುಂಗಿ ಹಾಕಿದ ಮೆಸ್ಕಾಂ ವಿದ್ಯುತ್ ಕಂಬಗಳು!: ಪಾದಚಾರಿಗಳ ಸುಗಮ ಸಂಚಾರಕ್ಕೆ ಬ್ರೇಕ್ !

08/11/2022, 14:16

ಅನುಷ್ ಪಂಡಿತ್ ಮಂಗಳೂರು

info.reporter Karnataka@gmail.com

ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವುದು, ವಾಹನ ನಿಲ್ಲಿಸುವುದು ತಪ್ಪು. ಆದರೆ ಫುಟ್ ಪಾತ್ ನಲ್ಲೇ ಮೆಸ್ಕಾಂನವರು ವಿದ್ಯುತ್ ಕಂಬ ನೆಟ್ಟರೆ ಹೇಗೆ? ಕಡಲನ ನಗರಿ ಮಂಗಳೂರಿನಲ್ಲಿ ಇಂತಹ ಅನೇಕ ತಾಜಾ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ.


ಮೊದಲೇ ಇಕ್ಕಟ್ಟಾದ ಫುಟ್ ಪಾತ್ ನಲ್ಲಿ ಅಲ್ಲಿಲ್ಲಿ ಮೆಸ್ಕಾಂ ವತಿಯಿಂದ ವಿದ್ಯುತ್ ಕಂಬಗಳನ್ನು ನೆಡಲಾಗಿದೆ. ಪಾದಚಾರಿಗಳ ತಲೆಗೆ ಹೊಡೆಯುವ ರೀತಿಯಲ್ಲಿ ಕಂಬಗಳಿವೆ.ನಗರದ ಕೆ.ಎಸ್. ರಾವ್ ರೋಡಿನಿಂದ ರಾಮಭವನ ರಸ್ತೆಗೆ ಸಾಗುವ ಫುಟ್ ಪಾತ್ ನಲ್ಲಿ ಇಂತಹ ದೃಶ್ಯ ಕಾಣಸಿಗುತ್ತದೆ. ಬಣ್ಣದ ಫುಟ್ ಪಾತ್ ನಲ್ಲೇ ವಿದ್ಯುತ್ ಕಂಬಗಳನ್ನು ನೆಡಲಾಗಿದೆ.

ಸ್ಮಾರ್ಟ್ ಮಂಗಳೂರಿಗೆ ಇದು ಕಪ್ಪು ಚುಕ್ಕೆಯಾಗಿದೆ. ನಡೆದು ಕೊಂಡು ಹೋಗುವ ಫುಟ್ ಪಾತ್ ನ್ನು ಮೆಸ್ಕಾಂ ಕಂಬಕ್ಕೆ ಬಳಸಿದರೆ ಅಂಗಡಿ ಎದುರಿನ ತಗ್ಗು ಜಾಗದಲ್ಲಿ ವಾಹನ ನಿಲ್ಲಿಸೋದು ತಪ್ಪೇ ಎಂದು ಕೆಲವು ವಾಹನ ಮಾಲೀಕರು ಪ್ರಶ್ನಿಸುತ್ತಾರೆ.
ಇತ್ತ ಪೊಲೀಸ್ ಫುಟ್ ಭತ್ ನಲ್ಲಿ ನಿಲ್ಲಿಸಿದ ವಾಹನಗಳನ್ನು ಲಾಕ್ ಹಾಕಿ ಫೈನ್ ಹಾಕುವ ಪ್ರಕ್ರಿಯೆ ಮಾಡಿಕೊಂಡಿದ್ದಾರೆ. ಅನೇಕ ಶಾಪ್ ಗಳು ಪಾರ್ಕಿಂಗ್ ಜಾಗವನ್ನೇ ನುಂಗಿವೆ. ಬಹುತೇಕ ಅಂಗಡಿಗಳಿಗೆ ಪಾರ್ಕಿಂಗ್ ಇಲ್ಲ. ಪಾರ್ಕಿಂಗ್ ಸಮಸ್ಯೆಯ ಪಾಲಿಕೆ ತಲೆಕೆಡಿಸಿಕೊಂಡಂತ್ತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು