4:41 AM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ವಾಕ್ 2 ಹೀಲ್ ವಾಕಥಾನ್; 1500 ಮಂದಿ ಭಾಗಿ

07/01/2025, 13:02

ಬೆಂಗಳೂರು(reporterkarnataka.com): ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗೋಪಾಲ್ಸ್ ಸಂಸ್ಥೆಯಿಂದ ನಗರದ ಕಬ್ಬನ್ ಪಾರ್ಕ್ ನಲ್ಲಿ ನಡೆದ ವಾಕ್ 2 ಹೀಲ್ ವಾಕಥಾನ್ ಗೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಚಾಲನೆ ನೀಡಿದರು.
ಗುಣಮುಖ( H E A L) ಇದರ 4 ಆಧಾರಸ್ತಂಭಗಳಾದ ಆರೋಗ್ಯ(Health),
ಪರಿಸರ(Environment), ಕೃಷಿ(Agriculture) ಮತ್ತು ಜೀವನಶೈಲಿ(Lifestyle) ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವುದು ಈ ವಾಕಥಾನ್ ನ ಮುಖ್ಯ ಉದ್ದೇಶವಾಗಿದೆ.
ಆರೋಗ್ಯ ಸುಧಾರಣೆ ಮಾಡಿಕೊಳ್ಳಲು ಮಾಲಿನ್ಯಮುಕ್ತ ಪರಿಸರ, ರಾಸಾಯನಿಕ ಮುಕ್ತ ದೇಶಿಯ ಹಟ್ಟಿಗೊಬ್ಬರದ ಕೃಷಿಗೆ ಉತ್ತೇಜನ ಮತ್ತು ಸುಸ್ಥಿರ ಜೀವನಕ್ಕೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿದೆ. ವಿಭಿನ್ನ ಸಮುದಾಯಕ್ಕೆ ಸೇರಿದ ಸುಮಾರು 1500 ಮಂದಿ ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ 200 ಮಂದಿ ವಿದ್ಯಾರ್ಥಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು