12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ವಾಕ್ 2 ಹೀಲ್ ವಾಕಥಾನ್; 1500 ಮಂದಿ ಭಾಗಿ

07/01/2025, 13:02

ಬೆಂಗಳೂರು(reporterkarnataka.com): ಜನರಲ್ಲಿ ಆರೋಗ್ಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಗೋಪಾಲ್ಸ್ ಸಂಸ್ಥೆಯಿಂದ ನಗರದ ಕಬ್ಬನ್ ಪಾರ್ಕ್ ನಲ್ಲಿ ನಡೆದ ವಾಕ್ 2 ಹೀಲ್ ವಾಕಥಾನ್ ಗೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಚಾಲನೆ ನೀಡಿದರು.
ಗುಣಮುಖ( H E A L) ಇದರ 4 ಆಧಾರಸ್ತಂಭಗಳಾದ ಆರೋಗ್ಯ(Health),
ಪರಿಸರ(Environment), ಕೃಷಿ(Agriculture) ಮತ್ತು ಜೀವನಶೈಲಿ(Lifestyle) ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವುದು ಈ ವಾಕಥಾನ್ ನ ಮುಖ್ಯ ಉದ್ದೇಶವಾಗಿದೆ.
ಆರೋಗ್ಯ ಸುಧಾರಣೆ ಮಾಡಿಕೊಳ್ಳಲು ಮಾಲಿನ್ಯಮುಕ್ತ ಪರಿಸರ, ರಾಸಾಯನಿಕ ಮುಕ್ತ ದೇಶಿಯ ಹಟ್ಟಿಗೊಬ್ಬರದ ಕೃಷಿಗೆ ಉತ್ತೇಜನ ಮತ್ತು ಸುಸ್ಥಿರ ಜೀವನಕ್ಕೆ ಉತ್ತೇಜನ ನೀಡುವುದು ಇದರ ಉದ್ದೇಶವಾಗಿದೆ. ವಿಭಿನ್ನ ಸಮುದಾಯಕ್ಕೆ ಸೇರಿದ ಸುಮಾರು 1500 ಮಂದಿ ವಾಕಥಾನ್ ನಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ 200 ಮಂದಿ ವಿದ್ಯಾರ್ಥಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು