2:17 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪತ್ನಿ ಮಕ್ಕಳಿಗೆ ಕ್ಷಮಿಸಿ ಎಂದು ಸೆಲ್ಫೀ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ: ಕಳ್ಳತನ ಆರೋಪಕ್ಕೆ ಹೆದರಿ ಸುಸೈಡ್

05/06/2024, 17:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾಡದ ತಪ್ಪಿಗೆ ನನ್ನನ್ನ ಹೊಣೆ ಮಾಡಿದ್ದಾರೆಂದು ಆರೋಪಿಸಿ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ರೇ ಹ್ಯಾನ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಖಾನೆಯ ಆವರಣದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕ್ಷಮಿಸುವಂತೆ ಮನವಿ ಮಾಡಿದ್ದಾರೆ. ತಾನು ಮಾಡದ ತಪ್ಪಿಗೆ ನನ್ನನ್ನ ಹೊಣೆ ಮಾಡಿದ್ದಾರೆಂದು ಪೊಲೀಸರ ವಿರುದ್ದ ಆರೋಪಿಸಿ ನೇಣಿಗೆ ಶರಣಾಗಿದ್ದಾರೆ. ಆದ್ರೆ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಕಾರ್ಖಾನೆಯಲ್ಲಿ ಕೆಲಸ ಇಲ್ಲ ಎಂದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದಾಖಲಾಗಿರುವುದು ಅಚ್ಚರಿ ಮೂಡಿಸಿದೆ.
ನಂಜನಗೂಡು ತಾಲ್ಲೂಕಿನ ಮಹದೇವನಗರದ ನಿವಾಸಿ 42 ವರ್ಷದ ನಂಜೇಶ್ ಆತ್ಮಹತ್ಯೆಗೆ ಶರಣಾದವರು. ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕರಾಗಿದ್ದ ನಂಜೇಶ್ ಕೆಲಸ ಕಳೆದುಕೊಂಡ ಕಾರಣ ರೇ ಹ್ಯಾನ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರ್ಖಾನೆಯಲ್ಲಿ ಕಳುವು ಪ್ರಕರಣವಾಗಿತ್ತು. ಈ ಆರೋಪವನ್ನು ನಂಜೇಶ್ ಮೇಲೂ ಹೊರೆಸಲಾಗಿತ್ತು ಎಂದು ಹೇಳಲಾಗಿದೆ. ಆತ್ಮಹತ್ಯೆಗೂ ಮುನ್ನ ವಿಡಿಯೋದಲ್ಲಿ ತಮಗಾದ ಕಿರುಕುಳವನ್ನ ಹೇಳಿಕೊಂಡಿದ್ದಾರೆ. ಕಳ್ಳರನ್ನ ಹಿಡಿದುಕೊಡಬೇಕು ಇಲ್ಲದಿದ್ದಲ್ಲಿ ನೀವೇ ಹೊಣೆಗಾರರಾಗುತ್ತೀರ ಎಂದು ಪೊಲೀಸರು ಒತ್ತಡ ಹೇರಿದ್ದಾರೆಂದು ಎದರಿಸಿದ್ದಾರೆ. ಈ ಹಿನ್ನಲೆ ಗೋವಿಂದ, ರಾಜು ಹಾಗೂ ಪೊಲೀಸರ ಹೆಸರನ್ನು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂಜೇಶ್ ಸಹೋದರ ನೀಡಿರುವ ದೂರು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸರಿಯಾದ ಕೆಲಸ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನೀಡಿರುವ ಹೇಳಿಕೆ ಅನುಮಾನಕ್ಕೆ ಕಾರಣವಾಗುತ್ತಿದೆ. ನಂಜೇಶ್ ರವರ ಮೇಲೆ ಹೇರಿದ ಒತ್ತಡವಾದ್ರೂ ಏನು ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ. ದೂರು ದಾಖಲಿಸಿಕೊಂಡಿರುವ ನಂಜನಗೂಡು ಪಟ್ಟಣ ಪೊಲೀಸರು ತನಿಖೆ ನಡೆಸಿ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ನ್ಯಾಯ ಒದಗಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು