1:27 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Foreign News | ಮಲೇಷ್ಯಾದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟ: ನೂರಾರು ಮಂದಿಗೆ ಸುಟ್ಟ ಗಾಯ; ಉಸಿರಾಟ ತೊಂದರೆ

02/04/2025, 22:42

ಕೌಲಾಲಂಪುರ(reporterkarnataka.com): ಮಲೇಷ್ಯಾದ ಕೌಲಾಲಂಪುರ ನಗರದ ಹೊರವಲಯದಲ್ಲಿ ಪುಚಾಂಗ್ ಎಂಬಲ್ಲಿ ಗ್ಯಾಸ್ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 100ಕ್ಕೂ ಹೆಚ್ಚು ಮಂದಿ ಸುಟ್ಟಗಾಯಗೊಂಡಿದ್ದಾರೆ.
ಗ್ಯಾಸ್ ಪೈಪ್ವಲೈನ್ ಸ್ಫೋಟದಿಂದ ನಾಗರಿಕರಿಗೆ
ಉಸಿರಾಟದ ತೊಂದರೆಗೀಡಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದೆ. ಸಾವಿನ ಪ್ರಮಾಣ ಇನ್ನೂ ವರದಿ ಆಗಿಲ್ಲ.
ಈ ಅವಘಡದಲ್ಲಿ ಬೆಂಕಿಯ ಕೆನ್ನಾಲಗೆ 20 ಮಹಡಿಗಳ ಮನೆಯಷ್ಟು ಎತ್ತರಕ್ಕೆ ಹರಡಿದ್ದು, ಐದಾರು ಮೈಲಿ ದೂರದಿಂದಲೂ ಕಾಣಿಸುತ್ತಿದೆ ಅಂತೆ. ಇದು ಎಲ್ಲೋ ದೂರದ ಕಥೆ. ನಮ್ಮ ಕರಾವಳಿಯಲ್ಲೂ ನಾವು ಇಂತಹದೇ ಅಗ್ನಿಕುಂಡದ ಮೇಲೆ ಬದುಕುತ್ತಿದ್ದೇವೆ ಎಂಬುದನ್ನು ಮರೆಯುವಂತಿಲ್ಲ. ಮಂಗಳೂರು-ಕೊಚ್ಚಿ ಗ್ಯಾಸ್ ಪೈಪ್‌ಲೈನ್, ಮಂಗಳೂರು – ಹಾಸನ – ಬೆಂಗಳೂರು ಪೈಪ್ ಲೈನ್, ಪೆರ್ಮುದೆಯಿಂದ ಪಾದೂರಿಗೆ ISPRL ಪೈಪ್‌ಲೈನ್.. ಹೀಗೆ.
ರಾಜಕಾರಣಿಗಳ ಗದ್ದಲ, ಬೇಜವಾಬ್ದಾರಿಗಳೆಲ್ಲ ಏನೇ ಇರಲಿ…. ಇಂತಹ ಅಪಾಯಕಾರಿ ಪೈಪ್‌ಲೈನ್‌ಗಳು, ಪೆಟ್ರೋಲಿಯಂ ರಿಸರ್ವ್ ಎಲ್ಲವೂ ಸುವ್ಯವಸ್ಥಿತ ಮತ್ತು ಸುರಕ್ಷಿತವಾಗಿ ಇರುವಂತೆ ಜವಾಬ್ದಾರಿ ಹೊಂದುವ ಬುದ್ಧಿಯನ್ನು ನಮ್ಮ ದೈವದೇವರುಗಳು ನಮ್ಮ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕರುಣಿಸಲಿ. ಈ ಎಲ್ಲ ಪೈಪ್‌ಲೈನ್‌ಗಳು ದಟ್ಟ ಜನಸಂದಣಿಗಳ-ಫಲವತ್ತಾದ ಭೂಮಿಗಳ ನಡುವೆಯೇ ಇರುವಂತಹವು. ಹಾಗಾಗಿ ಕರಾವಳಿಯನ್ನು ಇಂತಹ ಅಗ್ನಿ ಅವಘಡಗಳಿಂದ ರಕ್ಷಿಸುವ ಜವಾಬ್ದಾರಿಯನ್ನು ನಾವು ನಂಬಿದ ದೈವಗಳಿಗೇ ಬಿಡೋಣ.
ಮಲೇಷ್ಯಾದಲ್ಲಿ ಸಂಭವಿಸಿದಂತಹ ಈ ಅವಘಡಗಳ ಸುದ್ದಿ ಕೇಳಿದಾಗಲೆಲ್ಲ, ಮನಸ್ಸು ತಳಮಳಿಸುತ್ತದೆ. ಯಾರದ್ದೋ “ವಿಕಾಸಕ್ಕೆ” ನಮ್ಮ ಜೀವಗಳನ್ನೆಲ್ಲ ನಾವು ಅಡಾವು ಇಟ್ಟು ಕುಳಿತುಕೊಳ್ಳುವ ಸ್ಥಿತಿ ಬಂದಿದೆಯಲ್ಲಾ ಎಂದು.

(ಚಿತ್ರ ಸೌಜನ್ಯ: ರಾಯಿಟರ್)

ಇತ್ತೀಚಿನ ಸುದ್ದಿ

ಜಾಹೀರಾತು