4:36 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Foreign News | ಮಲೇಷ್ಯಾದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟ: ನೂರಾರು ಮಂದಿಗೆ ಸುಟ್ಟ ಗಾಯ; ಉಸಿರಾಟ ತೊಂದರೆ

02/04/2025, 22:42

ಕೌಲಾಲಂಪುರ(reporterkarnataka.com): ಮಲೇಷ್ಯಾದ ಕೌಲಾಲಂಪುರ ನಗರದ ಹೊರವಲಯದಲ್ಲಿ ಪುಚಾಂಗ್ ಎಂಬಲ್ಲಿ ಗ್ಯಾಸ್ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 100ಕ್ಕೂ ಹೆಚ್ಚು ಮಂದಿ ಸುಟ್ಟಗಾಯಗೊಂಡಿದ್ದಾರೆ.
ಗ್ಯಾಸ್ ಪೈಪ್ವಲೈನ್ ಸ್ಫೋಟದಿಂದ ನಾಗರಿಕರಿಗೆ
ಉಸಿರಾಟದ ತೊಂದರೆಗೀಡಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದೆ. ಸಾವಿನ ಪ್ರಮಾಣ ಇನ್ನೂ ವರದಿ ಆಗಿಲ್ಲ.
ಈ ಅವಘಡದಲ್ಲಿ ಬೆಂಕಿಯ ಕೆನ್ನಾಲಗೆ 20 ಮಹಡಿಗಳ ಮನೆಯಷ್ಟು ಎತ್ತರಕ್ಕೆ ಹರಡಿದ್ದು, ಐದಾರು ಮೈಲಿ ದೂರದಿಂದಲೂ ಕಾಣಿಸುತ್ತಿದೆ ಅಂತೆ. ಇದು ಎಲ್ಲೋ ದೂರದ ಕಥೆ. ನಮ್ಮ ಕರಾವಳಿಯಲ್ಲೂ ನಾವು ಇಂತಹದೇ ಅಗ್ನಿಕುಂಡದ ಮೇಲೆ ಬದುಕುತ್ತಿದ್ದೇವೆ ಎಂಬುದನ್ನು ಮರೆಯುವಂತಿಲ್ಲ. ಮಂಗಳೂರು-ಕೊಚ್ಚಿ ಗ್ಯಾಸ್ ಪೈಪ್‌ಲೈನ್, ಮಂಗಳೂರು – ಹಾಸನ – ಬೆಂಗಳೂರು ಪೈಪ್ ಲೈನ್, ಪೆರ್ಮುದೆಯಿಂದ ಪಾದೂರಿಗೆ ISPRL ಪೈಪ್‌ಲೈನ್.. ಹೀಗೆ.
ರಾಜಕಾರಣಿಗಳ ಗದ್ದಲ, ಬೇಜವಾಬ್ದಾರಿಗಳೆಲ್ಲ ಏನೇ ಇರಲಿ…. ಇಂತಹ ಅಪಾಯಕಾರಿ ಪೈಪ್‌ಲೈನ್‌ಗಳು, ಪೆಟ್ರೋಲಿಯಂ ರಿಸರ್ವ್ ಎಲ್ಲವೂ ಸುವ್ಯವಸ್ಥಿತ ಮತ್ತು ಸುರಕ್ಷಿತವಾಗಿ ಇರುವಂತೆ ಜವಾಬ್ದಾರಿ ಹೊಂದುವ ಬುದ್ಧಿಯನ್ನು ನಮ್ಮ ದೈವದೇವರುಗಳು ನಮ್ಮ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕರುಣಿಸಲಿ. ಈ ಎಲ್ಲ ಪೈಪ್‌ಲೈನ್‌ಗಳು ದಟ್ಟ ಜನಸಂದಣಿಗಳ-ಫಲವತ್ತಾದ ಭೂಮಿಗಳ ನಡುವೆಯೇ ಇರುವಂತಹವು. ಹಾಗಾಗಿ ಕರಾವಳಿಯನ್ನು ಇಂತಹ ಅಗ್ನಿ ಅವಘಡಗಳಿಂದ ರಕ್ಷಿಸುವ ಜವಾಬ್ದಾರಿಯನ್ನು ನಾವು ನಂಬಿದ ದೈವಗಳಿಗೇ ಬಿಡೋಣ.
ಮಲೇಷ್ಯಾದಲ್ಲಿ ಸಂಭವಿಸಿದಂತಹ ಈ ಅವಘಡಗಳ ಸುದ್ದಿ ಕೇಳಿದಾಗಲೆಲ್ಲ, ಮನಸ್ಸು ತಳಮಳಿಸುತ್ತದೆ. ಯಾರದ್ದೋ “ವಿಕಾಸಕ್ಕೆ” ನಮ್ಮ ಜೀವಗಳನ್ನೆಲ್ಲ ನಾವು ಅಡಾವು ಇಟ್ಟು ಕುಳಿತುಕೊಳ್ಳುವ ಸ್ಥಿತಿ ಬಂದಿದೆಯಲ್ಲಾ ಎಂದು.

(ಚಿತ್ರ ಸೌಜನ್ಯ: ರಾಯಿಟರ್)

ಇತ್ತೀಚಿನ ಸುದ್ದಿ

ಜಾಹೀರಾತು