12:07 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

Foreign News | ಮಲೇಷ್ಯಾದಲ್ಲಿ ಗ್ಯಾಸ್ ಪೈಪ್‌ಲೈನ್ ಸ್ಫೋಟ: ನೂರಾರು ಮಂದಿಗೆ ಸುಟ್ಟ ಗಾಯ; ಉಸಿರಾಟ ತೊಂದರೆ

02/04/2025, 22:42

ಕೌಲಾಲಂಪುರ(reporterkarnataka.com): ಮಲೇಷ್ಯಾದ ಕೌಲಾಲಂಪುರ ನಗರದ ಹೊರವಲಯದಲ್ಲಿ ಪುಚಾಂಗ್ ಎಂಬಲ್ಲಿ ಗ್ಯಾಸ್ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 100ಕ್ಕೂ ಹೆಚ್ಚು ಮಂದಿ ಸುಟ್ಟಗಾಯಗೊಂಡಿದ್ದಾರೆ.
ಗ್ಯಾಸ್ ಪೈಪ್ವಲೈನ್ ಸ್ಫೋಟದಿಂದ ನಾಗರಿಕರಿಗೆ
ಉಸಿರಾಟದ ತೊಂದರೆಗೀಡಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದೆ. ಸಾವಿನ ಪ್ರಮಾಣ ಇನ್ನೂ ವರದಿ ಆಗಿಲ್ಲ.
ಈ ಅವಘಡದಲ್ಲಿ ಬೆಂಕಿಯ ಕೆನ್ನಾಲಗೆ 20 ಮಹಡಿಗಳ ಮನೆಯಷ್ಟು ಎತ್ತರಕ್ಕೆ ಹರಡಿದ್ದು, ಐದಾರು ಮೈಲಿ ದೂರದಿಂದಲೂ ಕಾಣಿಸುತ್ತಿದೆ ಅಂತೆ. ಇದು ಎಲ್ಲೋ ದೂರದ ಕಥೆ. ನಮ್ಮ ಕರಾವಳಿಯಲ್ಲೂ ನಾವು ಇಂತಹದೇ ಅಗ್ನಿಕುಂಡದ ಮೇಲೆ ಬದುಕುತ್ತಿದ್ದೇವೆ ಎಂಬುದನ್ನು ಮರೆಯುವಂತಿಲ್ಲ. ಮಂಗಳೂರು-ಕೊಚ್ಚಿ ಗ್ಯಾಸ್ ಪೈಪ್‌ಲೈನ್, ಮಂಗಳೂರು – ಹಾಸನ – ಬೆಂಗಳೂರು ಪೈಪ್ ಲೈನ್, ಪೆರ್ಮುದೆಯಿಂದ ಪಾದೂರಿಗೆ ISPRL ಪೈಪ್‌ಲೈನ್.. ಹೀಗೆ.
ರಾಜಕಾರಣಿಗಳ ಗದ್ದಲ, ಬೇಜವಾಬ್ದಾರಿಗಳೆಲ್ಲ ಏನೇ ಇರಲಿ…. ಇಂತಹ ಅಪಾಯಕಾರಿ ಪೈಪ್‌ಲೈನ್‌ಗಳು, ಪೆಟ್ರೋಲಿಯಂ ರಿಸರ್ವ್ ಎಲ್ಲವೂ ಸುವ್ಯವಸ್ಥಿತ ಮತ್ತು ಸುರಕ್ಷಿತವಾಗಿ ಇರುವಂತೆ ಜವಾಬ್ದಾರಿ ಹೊಂದುವ ಬುದ್ಧಿಯನ್ನು ನಮ್ಮ ದೈವದೇವರುಗಳು ನಮ್ಮ ರಾಜಕಾರಣಿಗಳಿಗೆ, ಅಧಿಕಾರಿಗಳಿಗೆ ಕರುಣಿಸಲಿ. ಈ ಎಲ್ಲ ಪೈಪ್‌ಲೈನ್‌ಗಳು ದಟ್ಟ ಜನಸಂದಣಿಗಳ-ಫಲವತ್ತಾದ ಭೂಮಿಗಳ ನಡುವೆಯೇ ಇರುವಂತಹವು. ಹಾಗಾಗಿ ಕರಾವಳಿಯನ್ನು ಇಂತಹ ಅಗ್ನಿ ಅವಘಡಗಳಿಂದ ರಕ್ಷಿಸುವ ಜವಾಬ್ದಾರಿಯನ್ನು ನಾವು ನಂಬಿದ ದೈವಗಳಿಗೇ ಬಿಡೋಣ.
ಮಲೇಷ್ಯಾದಲ್ಲಿ ಸಂಭವಿಸಿದಂತಹ ಈ ಅವಘಡಗಳ ಸುದ್ದಿ ಕೇಳಿದಾಗಲೆಲ್ಲ, ಮನಸ್ಸು ತಳಮಳಿಸುತ್ತದೆ. ಯಾರದ್ದೋ “ವಿಕಾಸಕ್ಕೆ” ನಮ್ಮ ಜೀವಗಳನ್ನೆಲ್ಲ ನಾವು ಅಡಾವು ಇಟ್ಟು ಕುಳಿತುಕೊಳ್ಳುವ ಸ್ಥಿತಿ ಬಂದಿದೆಯಲ್ಲಾ ಎಂದು.

(ಚಿತ್ರ ಸೌಜನ್ಯ: ರಾಯಿಟರ್)

ಇತ್ತೀಚಿನ ಸುದ್ದಿ

ಜಾಹೀರಾತು