5:46 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ ತಪ್ಪಿದ ದೊಡ್ಡ ಅನಾಹುತ

25/02/2025, 22:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಪ್ರದೇಶಕ್ಕೆ ಪ್ರವಾಸಿಗರು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದು, ಕಾಡ್ಗಿಚ್ಚಿನಿಂದ ಭಾರೀ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಯಾರೋ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಹುಲ್ಲುಗಾವಲು, ಗಿಡಗಂಟಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.


ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರಂಜಿತ್, ಗಸ್ತು ಅರಣ್ಯ ಪಾಲಕ ಅಭಿಜಿತ್, ಉಮೇಶ್ ಮತ್ತು ಅರಣ್ಯ ವೀಕ್ಷಕ ದಿನೇಶ್ ಅವರ ತಂಡ ದುರಂತವನ್ನು ತಡೆಯಲು ಹರಸಾಹಸ ಪಟ್ಟು ಬೆಂಕಿ ನಂದಿಸಿದರು. ಅವರು ತಕ್ಷಣವೇ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮ ಕೈಗೊಂಡುದರಿಂದ ದೊಡ್ಡ ಪ್ರಮಾಣದ ಹಾನಿ ತಪ್ಪಿತು.
ಇಲ್ಲಿನ ಐತಿಹಾಸಿಕ ಸ್ಥಳದ ಸುರಕ್ಷತೆಗಾಗಿ ಹಾಗೂ ಇಂತಹ ಘಟನೆಗಳು ಪುನರಾವೃತಗೊಳ್ಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರದೇಶದಲ್ಲಿ ನಿಗಾ ದಳವನ್ನು ಬಿಗಿಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು