8:17 PM Friday26 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

26/12/2025, 19:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇದು ಬೇಲಿಯೇ ಎದ್ದು ಹೊಲ ಮೇಯ್ದoತೆ ಎನ್ನುವ ಗಾದೆ ಮಾತಿನಂತೆ ಕೊಡಗು ಜಿಲ್ಲೆಯಲ್ಲಿ ಅರಣ್ಯ ರಕ್ಷಣೆ ಮಾಡಬೇಕಾದವರು ಬೆಲೆ ಬಾಳುವ ಮರವನ್ನು ಕಳುವು ಮಾಡಿರುವ ಘಟನೆ ನಡೆದಿದೆ. ಈ ಹಿಂದೆ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಬಳಿ ಮೀಸಲು ಅರಣ್ಯದಲ್ಲಿ ಮರಗಳ ಕಳ್ಳತನ ಬಗ್ಗೆ ದೂರು ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಇಲಾಖೆಗೆ ಶಾಕ್ ಆಗಿದ್ದರೆ, ಕಳ್ಳರನ್ನು ಹಿಡಿಯುವ ವೇಳೆ ಸಂಘರ್ಷ ಉಂಟಾಗಿದ್ದು,ಈ ವೇಳೆ ಅಧಿಕಾರಿ ಚಂದ್ರಶೇಖರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ದಾಳಿ ವೇಳೆ ಲೋಡರ್ ಸಂತೋಷ್ ನನ್ನು ಬಂಧಿಸಿದ್ದು ಉಳಿದ ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ನಾಪತ್ತೆಯಾದ ಎಲ್ಲರೂ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರರು ಎಂದು ತಿಳಿದು ಬಂದಿದೆ. ಸದ್ಯ ಎಡವಾರೆ ಮೀಸಲು ಅರಣ್ಯದಲ್ಲಿ 25 ಮರಗಳು ಕಳುವಾಗಿದ್ದು ಈ ವರೆಗೆ 7 ಮರ ಹಾಗೂ ಪಿಕ್ ಅಪ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು