1:28 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

26/12/2025, 19:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇದು ಬೇಲಿಯೇ ಎದ್ದು ಹೊಲ ಮೇಯ್ದoತೆ ಎನ್ನುವ ಗಾದೆ ಮಾತಿನಂತೆ ಕೊಡಗು ಜಿಲ್ಲೆಯಲ್ಲಿ ಅರಣ್ಯ ರಕ್ಷಣೆ ಮಾಡಬೇಕಾದವರು ಬೆಲೆ ಬಾಳುವ ಮರವನ್ನು ಕಳುವು ಮಾಡಿರುವ ಘಟನೆ ನಡೆದಿದೆ. ಈ ಹಿಂದೆ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಬಳಿ ಮೀಸಲು ಅರಣ್ಯದಲ್ಲಿ ಮರಗಳ ಕಳ್ಳತನ ಬಗ್ಗೆ ದೂರು ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಇಲಾಖೆಗೆ ಶಾಕ್ ಆಗಿದ್ದರೆ, ಕಳ್ಳರನ್ನು ಹಿಡಿಯುವ ವೇಳೆ ಸಂಘರ್ಷ ಉಂಟಾಗಿದ್ದು,ಈ ವೇಳೆ ಅಧಿಕಾರಿ ಚಂದ್ರಶೇಖರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ದಾಳಿ ವೇಳೆ ಲೋಡರ್ ಸಂತೋಷ್ ನನ್ನು ಬಂಧಿಸಿದ್ದು ಉಳಿದ ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ನಾಪತ್ತೆಯಾದ ಎಲ್ಲರೂ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರರು ಎಂದು ತಿಳಿದು ಬಂದಿದೆ. ಸದ್ಯ ಎಡವಾರೆ ಮೀಸಲು ಅರಣ್ಯದಲ್ಲಿ 25 ಮರಗಳು ಕಳುವಾಗಿದ್ದು ಈ ವರೆಗೆ 7 ಮರ ಹಾಗೂ ಪಿಕ್ ಅಪ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು