5:53 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

04/06/2025, 23:53

ಬೆಂಗಳೂರು(reporterkarnataka.com): ಐಪಿಎಲ್ ನಲ್ಲಿ ಆರ್ ಸಿಬಿ ತಂಡ ಜಯ ಗಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಸರಿಯಾದ ಸಿದ್ದತೆ ಇಲ್ಲದೇ ತರಾತುರಿಯಲ್ಲಿ ಏರ್ಪಡಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನ ಅಮಾಯಕರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದು ಅತ್ಯಂತ ದುಖದ ಸಂಗತಿ, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಯಾವುದೇ ಪೂರ್ವ ತಯಾರಿ ಇಲ್ಲದೆ ಅವಸರದಲ್ಲಿ ಎರಡು ಕಾರ್ಯಕ್ರಮ ಮಾಡಿದ್ದು, ಅದರಲ್ಲೂ ಎರಡೂ ಕಾರ್ಯಕ್ರಮಗಳಲ್ಲಿ ಅಷ್ಡೊಂದು ಜನ ಸೇರಲು ಅವಕಾಶ ಮಾಡಿಕೊಟ್ಟಿದ್ದು, ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ.
ಹಿಂದೆ ವಿಶ್ವ ಕಪ್ ಮತ್ತು ಇತರ ಕಪ್ ಗೆದ್ದಾಗ ಮುಂಬೈನಲ್ಲಿ ಮೆರವಣಿಗೆ ಮಾಡುವ ಮುಖಾಂತರ ಜನರಿಗೆ ಅಲ್ಲಲ್ಲಿ‌ ಕ್ರಿಕೆಟ್ ಆಟಗಾರರನ್ನು ನೋಡಲು ಅವಕಾಶ ಕಲ್ಪಿಸಿದ್ದು ಸಾಕಷ್ಟು ಉದಾಹರಣೆ ಇದೆ.
ಈ ವಿಚಾರದಲ್ಲಿ ಜನರ ಸಂಖ್ಯೆಯ ಅಂದಾಜು ಇಲ್ಲದೆ ಆರ್ ಸಿಬಿ ಪರವಾಗಿರುವ ಜನರ ಭಾವನಾತ್ಮಕ ಸಂಬಂಧ ಅರಿಯದೆ ಪೊಲಿಸರು ಮತ್ರು ಆಯೋಜಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಸ್ಪಷ್ಟ. ರಾಜ್ಯ ಸರ್ಕಾರವೇ ಇದಕ್ಕೆ ಕಾರಣ ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ತಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು