5:53 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮಾಜಿ ಡಿವೈಎಸ್ಪಿ ದಿವಂಗತ ಗಣಪತಿ ಆರೋಪ: ಕೇಶವನಾರಾಯಣ ಆಯೋಗ ವರದಿ ತಿರಸ್ಕಾರ

25/09/2025, 20:13

ಬೆಂಗಳೂರು(reporterkarnataka.com): ಹಿಂದಿನ ಗೃಹಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ಐ.ಪಿ.ಎಸ್‌.ಎ.ಎಮ್‌. ಪ್ರಸಾದ ಹಾಗೂ ಐ.ಪಿ.ಎಸ್‌ ಪ್ರಣವ ಮೊಹಾಂತಿ ಅವರ ವಿರುದ್ಧ ದಿ.ಗಣಪತಿಯವರು ಸಂದರ್ಶನದಲ್ಲಿ ಆರೋಪಿಸಿರುವುದನ್ನು ಕೇಶವನಾರಾಯಣ ಆಯೋಗದ ವರದಿ ತಳ್ಳಿಹಾಕಿದೆ.
ಎಮ್‌.ಕೆ.ಗಣಪತಿಯವರ ಆತ್ಮಹತ್ಯೆಗೆ ಇವರುಗಳು ಕಾರಣವಲ್ಲವೆಂಬ ಅಭಿಪ್ರಾಯವನ್ನು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದ್ದು, ತನಿಖಾ ಪ್ರಕರಣದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿರುವುದರಿಂದ ಕೆಲವು ಅಧಿಕಾರಿ/ಸಿಬ್ಬಂದಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಡಿರುವ ಶಿಫಾರಸ್ಸನ್ನು ರಾಜ್ಯ ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಶ್ರೀ ಎಂ.ಕೆ ಶ್ರೀವಾಸ್ತವ್‌, ಐಪಿಎಸ್‌ ನಿವೃತ್ತ ಪೊಲೀಸ್‌ ಮಹಾನಿರ್ದೇಶಕರು ಇವರು ಸರ್ಕಾರಕ್ಕೆ ಸಲ್ಲಿಸಿರುವ ಅಧ್ಯಯನ ವರದಿಯಲ್ಲಿ ತನಿಖಾ ಕ್ರಮಗಳ ಬಗ್ಗೆ ವಿಚಾರಣಾ ಆಯೋಗವು ಮಾಡಿರುವ ಆಕ್ಷೇಪಣೆಗಳನ್ನು ಸಿ.ಬಿ.ಐ ಸಲ್ಲಿಸಿರುವ ವರದಿಯನ್ನು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯವು ಮಾನ್ಯ ಮಾಡಿರುವುದರಿಂದ ಮತ್ತು ಮಾನ್ಯ ಸರ್ವೋಚ್ಛ ನ್ಯಾಯಾಲಯವು ಎಸ್‌.ಎಲ್‌.ಪಿ ಯಲ್ಲಿ ಸಿ.ಬಿ.ಐ ಪ್ರಕರಣವನ್ನು ಮುಕ್ತಾಯ ಮಾಡಿರುವುದನ್ನು ಎತ್ತಿ ಹಿಡಿದಿರುವುದರಿಂದ, ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯ ಶಿಫಾರಸ್ಸನ್ನು ಒಪ್ಪುವ ಅಗತ್ಯವಿಲ್ಲವೆಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿರುತ್ತದೆ.
ಕೆ.ಎನ್‌. ಕೇಶವನಾರಾಯಣ ಅವರು ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಇವರ ವಿಚಾರಣಾ ವರದಿಯನ್ನು ಸಚಿವ ಸಂಪುಟವು ಭಾಗಶ: ಒಪ್ಪಿ, ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯ ಶಿಫಾರಸ್ಸನು ತಿರಸ್ಕರಿಸಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು