5:55 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪುತ್ತೂರು ಶಾಸಕರ ಆರೋಪದ ಬೆನ್ನಲ್ಲೇ ಮಹಾಲಿಂಗೇಶ್ವರ ದೇಗುಲದ ಬಾಕಿ ಮೊತ್ತ 25 ಸಾವಿರ ಪಾವತಿಸಿದ ಮಾಜಿ ಶಾಸಕ ಮಠಂದೂರು!

25/10/2025, 16:23

ಪುತ್ತೂರು(reporterkarnataka.com): ಇಲ್ಲಿನ ಶ್ರೀ ಮಹಾಲಿಂಗೇಶ್ವರ ರಥೋತ್ಸವ ಸಂದರ್ಭದಲ್ಲಿ ಬ್ರಹ್ಮರಥ ಪೂಜೆಗೆ ರಶೀದಿ ಮಾಡಿಸಿ, ಪೂಜೆ ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರನಿಗೆ ವಂಚಿಸಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಆರೋಪಿಸಿದ ಬೆನ್ನಲ್ಲೇ ಮಠಂದೂರು ಅವರು ದೇಗುಲಕ್ಕೆ ಹಣ ಪಾವತಿಸಿದ್ದಾರೆ.
ಶಾಸಕ ಅಶೋಕ್ ಕುಮಾರ್ ರೈ ಅವರು ಇತ್ತೀಚೆಗೆ ನಡೆಸಿದ ಅಶೋಕ ಜನ-ಮನ ಕಾರ್ಯಕ್ರಮದಲ್ಲಿ 13 ಮಂದಿ ಅಸ್ವಸ್ಥರಾದ ಕುರಿತು ಮಠಂದೂರು ಅವರು ಪ್ರತಿಕ್ರಿಯಿಸಿ, ಇದಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರ ಬೇಜವಾಬ್ದಾರಿ ಕಾರಣ ಎಂದು ಟೀಕಿಸಿದ್ದರು. ಇದರಿಂದ ಆಕ್ರೋಶಗೊಂಡ ಅಶೋಕ್ ಕುಮಾರ್ ರೈ ಅವರು ಮಾಜಿ ಶಾಸಕರು ಪ್ರಸಾದ ಸ್ವೀಕರಿಸಿ 25 ಸಾವಿರ ರೂ. ಪಾವತಿಸದೆ ವಂಚಿಸಿದ್ದಾರೆ ಎಂದು ಖಾರವಾಗಿ ಆರೋಪಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು