7:49 AM Wednesday15 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ ಬ್ಯಾಂಕ್ ಗಳಿಗೆ ಕೇಂದ್ರ ವಿತ್ತ ಸಚಿವೆ ಆದೇಶ

12/02/2026, 19:07

ನವದೆಹಲಿ(reporterkarnataka.com): ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗಕ್ಕೆ ಮಾರ್ಗದರ್ಶಕರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ವಿತ್ತ ಸಚಿವರಿಗೆ SARFAESI ಎಂಬ ಕರಾಳ ಕಾಯ್ದೆಯ ಕುರಿತು ಮನಮುಟ್ಟುವಂತೆ ವಿವರಿಸಿದರು.

ಶೇ. 95 ಕ್ಕೂ ಹೆಚ್ಚು ಭಾಗ ಸಣ್ಣ-ಅತಿ ಸಣ್ಣ ಬೆಳೆಗಾರರನ್ನು ಹೊಂದಿರುವ ಕಾಫಿ ಕೃಷಿ ಕ್ಷೇತ್ರದ ಸಾಲಗಾರರಿಗೆ ಮಾರಕವಾಗಿ ಪರಿಣಮಿಸಿರುವ ಸರ್ಫಾಸಿ ಕಾಯ್ದೆಯ ದುಷ್ಪರಿಣಾಮ ಹಾಗೂ ಕೆಲವು ಬ್ಯಾಂಕರ್ ಗಳು ಹಾಗೂ ಮಧ್ಯವರ್ತಿಗಳು ಈ ಕಾಯ್ದೆಯ ದುರುಪಯೋಗ ಮಾಡುತ್ತಿರುವ ಕುರಿತು ಸವಿವರವಾಗಿ ಮನದಟ್ಟು ಮಾಡಲಾಯಿತು.
ಈ ಬಗ್ಗೆ ಅತ್ಯಂತ ಸಹಾನುಭೂತಿ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ತಾವು ಕಾಫಿ ಕೃಷಿ ಸಾಲದ ವಸೂಲಾತಿಗೆ SARFAESI ಕಾಯ್ದೆ ಬಳಕೆ ಬಗ್ಗೆ ವಿವರವಾಗಿ ಪರಿಶೀಲಿಸುವುದಾಗಿ ತಿಳಿಸಿರುತ್ತಾರೆ. ಅತ್ಯಂತ ಪ್ರಮುಖವಾಗಿ ಈ ಕೂಡಲೇ ಜಾರಿಗೆ ಬರುವಂತೆ SARFA ESl ಅಡಿಯಲ್ಲಿ e-auction (ಆನ್ ಲೈನ್ ಹರಾಜು) ಸ್ಥಗಿತಗೊಳಿಸುವಂತೆ ಬ್ಯಾಂಕ್ ಗಳಿಗೆ ಸೂಚಿಸಲು ಅಧಿಕಾರಿಗಳಿಗೆ ಆದೇಶ ನೀಡಿರುತ್ತಾರೆ.
ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಸಂಸದರಾದ ಡಾ. ಸಿ.ಎನ್. ಮಂಜುನಾಥ್. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಶ್ರೀ ಮಲ್ಲೇಶ್ ಇದ್ದರು.
ಫೆಬ್ರವರಿ 9,10 ಹಾಗೂ 11 ರಂದು ಕರ್ನಾಟಕ ಗೊವರ್ಸ್ ಫೆಡರೇಶನ್ (ಕೆಜಿಫ್) ಅಧ್ಯಕ್ಷರಾದ ಹಳಸೆ ಶಿವಣ್ಣನವರ ನೇತೃತ್ವದ ನಿಯೋಗ ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ, ಭೂಪೇಂದ್ರ ಯಾದವ್,ಮಾಜಿ ಪ್ರಧಾನಿಗಳಾದ ಹೆಚ್. ಡಿ. ದೇವೇಗೌಡರು. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಡಾ. ಸಿ.ಎನ್ ಮಂಜುನಾಥ್ ಹಾಗೂ ಹಲವು ಸಚಿವಾಲಯದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮನದಟ್ಟು ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು