4:45 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ

11/04/2025, 22:22

ಮಂಗಳೂರು(reporterkarnataka.com):ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.



ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಡಯಾಲಿಸಿಸ್ ಕೇಂದ್ರ ನಿವ೯ಹಿಸಲಾಗುವುದು ಎಂದು ಅವರು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಉಳ್ಳಾಲ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದಜೆ೯ಗೇರಿಸಲಾಗಿದೆ. ಇಲ್ಲಿ ದೊರಕುತ್ತಿರುವ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದ ಹಿಂದೆ ಪ್ರತೀ ದಿನ 30ರಷ್ಟಿದ್ದ ಹೊರರೋಗಿಗಳ ಸಂಖ್ಯೆ ಸುಮಾರು 400 ಕ್ಕೇರಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸುಸಜ್ಜಿತವಾದ ಉಳ್ಳಾಲ ಆರೋಗ್ಯ ಕೇಂದ್ರ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಗೆ ವೈದ್ಯರು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗುವುದು ಎಂದರು.
ರಾಜ್ಯದಲ್ಲಿ ಆರೋಗ್ಯ ಕೇಂದ್ರ ಮತ್ತು ಆಸ್ಪತ್ರೆಗಳಿಗೆ ಸಿಬ್ಬಂಧಿ ಒದಗಿಸಲು ಒತ್ತು ನೀಡಲಾಗಿದೆ. ಆರೋಗ್ಯ ಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳು ಸುಧಾರಣೆಗೊಂಡಿವೆ. ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸಿದರೆ ಜನಸಾಮಾನ್ಯರಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುಡಾ ಅಧ್ಯಕ್ಷ ಸದಾಶಿವ, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಯೆನಪೋಯಾ ಅಬ್ದುಲ್ಲಾ ಕುಂಞಿ, ನಗರಸಭೆ ಅಧ್ಯಕ್ಷೆ ಶಶಿಕಲಾ, ಬಿಪಿಸಿಎಲ್ ಅಧಿಕಾರಿ ಮೀರಾ ಸಿಂಗ್, ಯೆನಪೋಯಾ ವಿವಿ ಕುಲಪತಿ ಅಬ್ದುಲ್ಲಾ ಕುಂಞಿ ಮತ್ತಿತರರು ಇದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು