3:25 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ

11/04/2025, 22:22

ಮಂಗಳೂರು(reporterkarnataka.com):ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.



ಉಳ್ಳಾಲದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಬೇಕೆಂದು ಸಾಕಷ್ಟು ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಯೆನಪೋಯ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಡಯಾಲಿಸಿಸ್ ಕೇಂದ್ರ ನಿವ೯ಹಿಸಲಾಗುವುದು ಎಂದು ಅವರು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರವಾಗಿದ್ದ ಉಳ್ಳಾಲ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದಜೆ೯ಗೇರಿಸಲಾಗಿದೆ. ಇಲ್ಲಿ ದೊರಕುತ್ತಿರುವ ಉತ್ತಮ ವೈದ್ಯಕೀಯ ಚಿಕಿತ್ಸೆಯಿಂದ ಹಿಂದೆ ಪ್ರತೀ ದಿನ 30ರಷ್ಟಿದ್ದ ಹೊರರೋಗಿಗಳ ಸಂಖ್ಯೆ ಸುಮಾರು 400 ಕ್ಕೇರಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸುಸಜ್ಜಿತವಾದ ಉಳ್ಳಾಲ ಆರೋಗ್ಯ ಕೇಂದ್ರ ರಾಜ್ಯಕ್ಕೆ ಮಾದರಿಯಾಗಿದೆ. ಇಲ್ಲಿಗೆ ವೈದ್ಯರು ಹಾಗೂ ಆಧುನಿಕ ವೈದ್ಯಕೀಯ ಉಪಕರಣಗಳನ್ನು ಒದಗಿಸಲಾಗುವುದು ಎಂದರು.
ರಾಜ್ಯದಲ್ಲಿ ಆರೋಗ್ಯ ಕೇಂದ್ರ ಮತ್ತು ಆಸ್ಪತ್ರೆಗಳಿಗೆ ಸಿಬ್ಬಂಧಿ ಒದಗಿಸಲು ಒತ್ತು ನೀಡಲಾಗಿದೆ. ಆರೋಗ್ಯ ಕ್ಕೆ ಸಂಬಂಧಿಸಿದ ತಂತ್ರಜ್ಞಾನಗಳು ಸುಧಾರಣೆಗೊಂಡಿವೆ. ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸಿದರೆ ಜನಸಾಮಾನ್ಯರಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುಡಾ ಅಧ್ಯಕ್ಷ ಸದಾಶಿವ, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಯೆನಪೋಯಾ ಅಬ್ದುಲ್ಲಾ ಕುಂಞಿ, ನಗರಸಭೆ ಅಧ್ಯಕ್ಷೆ ಶಶಿಕಲಾ, ಬಿಪಿಸಿಎಲ್ ಅಧಿಕಾರಿ ಮೀರಾ ಸಿಂಗ್, ಯೆನಪೋಯಾ ವಿವಿ ಕುಲಪತಿ ಅಬ್ದುಲ್ಲಾ ಕುಂಞಿ ಮತ್ತಿತರರು ಇದ್ದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು