12:25 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು

01/11/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ.
ಎನ್.ಆರ್.ಪುರ ತಾಲೂಕಿನ
ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶೋಕ್ ಕಾಂಬೋಡಿಯಾದಲ್ಲಿ ಬಂಧನಕ್ಕೀಡಾದ ಯುವಕ ಎಂದು ಗುರುತಿಸಲಾಗಿದೆ.
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ವಿದೇಶದಲ್ಲಿ ಕೆಲಸದ ಆಸೆಗೆ ತೆರಳಿದ್ದ ಯುವಕನನ್ನು
ಮಾಲೀಕ ಬಂಧನದಲ್ಲಿಟ್ಟಿದ್ದಾನೆ. ನಾನು ಇಲ್ಲಿ ಕೆಲಸ ಮಾಡಲ್ಲ, ಭಾರತಕ್ಕೆ ವಾಪಸ್ ಹೋಗುತ್ತೇನೆ ಎಂದಾಗ ಮಾಲೀಕ ಯುವಕನಿಗೆ ಈ ವಿಚಿತ್ರ ಶಿಕ್ಷೆ ನೀಡಿದ್ದಾನೆ. ಯುವಕನನ್ನು ಕತ್ತಲು ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಕೆಲಸ ಬಿಟ್ಟು ವಾಪಾಸ್ ಊರಿಗೆ ತೆರಳಬೇಕಾದರೆ 13 ಲಕ್ಷ ಹಣ ಬೇಡಿಕೆ ಇಟ್ಟಿದ್ದಾನೆ.
ಸುರೇಶ್ ಮತ್ತು‌ ಪ್ರೇಮಾ ದಂಪತಿಯ ಮೊದಲ ಪುತ್ರನಾದ ಅಶೋಕ್ ಇದೀಗ ವಿದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾನೆ. ಮಗನ್ನು ನೆನೆದು ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಯುವಕನ ಪೋಷಕರು ಸೇರಿದಂತೆ ಕುಟುಂಬಸ್ಥರು, ಗ್ರಾಮಸ್ಥರು ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು