12:04 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು

01/11/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ.
ಎನ್.ಆರ್.ಪುರ ತಾಲೂಕಿನ
ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶೋಕ್ ಕಾಂಬೋಡಿಯಾದಲ್ಲಿ ಬಂಧನಕ್ಕೀಡಾದ ಯುವಕ ಎಂದು ಗುರುತಿಸಲಾಗಿದೆ.
ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ವಿದೇಶದಲ್ಲಿ ಕೆಲಸದ ಆಸೆಗೆ ತೆರಳಿದ್ದ ಯುವಕನನ್ನು
ಮಾಲೀಕ ಬಂಧನದಲ್ಲಿಟ್ಟಿದ್ದಾನೆ. ನಾನು ಇಲ್ಲಿ ಕೆಲಸ ಮಾಡಲ್ಲ, ಭಾರತಕ್ಕೆ ವಾಪಸ್ ಹೋಗುತ್ತೇನೆ ಎಂದಾಗ ಮಾಲೀಕ ಯುವಕನಿಗೆ ಈ ವಿಚಿತ್ರ ಶಿಕ್ಷೆ ನೀಡಿದ್ದಾನೆ. ಯುವಕನನ್ನು ಕತ್ತಲು ಕೋಣೆಯಲ್ಲಿ ಕೂಡಿ ಹಾಕಿದ್ದಾನೆ. ಕೆಲಸ ಬಿಟ್ಟು ವಾಪಾಸ್ ಊರಿಗೆ ತೆರಳಬೇಕಾದರೆ 13 ಲಕ್ಷ ಹಣ ಬೇಡಿಕೆ ಇಟ್ಟಿದ್ದಾನೆ.
ಸುರೇಶ್ ಮತ್ತು‌ ಪ್ರೇಮಾ ದಂಪತಿಯ ಮೊದಲ ಪುತ್ರನಾದ ಅಶೋಕ್ ಇದೀಗ ವಿದೇಶದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದಾನೆ. ಮಗನ್ನು ನೆನೆದು ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಯುವಕನ ಪೋಷಕರು ಸೇರಿದಂತೆ ಕುಟುಂಬಸ್ಥರು, ಗ್ರಾಮಸ್ಥರು ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು