11:46 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

‘ಫ್ರೀಫೈರ್’ ಗೇಮ್ ಅಡಿಕ್ಷನ್ : ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

24/04/2026, 20:45

ಹುಬ್ಬಳ್ಳಿ(reporterkarnataka.com): ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿ ನಗರದ ಉದಯನಗರದಲ್ಲಿ ನಡೆದಿದೆ. ‘ಫ್ರೀಫೈರ್’ ಗೇಮ್‌ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲಕನೇ ಈ ಅತಿರೇಕದ ನಿರ್ಧಾರಕ್ಕೆ ಶರಣಾದ ದುರ್ದೈವಿ. ಗೇಮ್ ಅಡಿಕ್ಷನ್: ಸಮರ್ಥ್ ಕಳೆದ ಕೆಲವು ದಿನಗಳಿಂದ ಸತತವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುತ್ತಿದ್ದ. ಗುರುವಾರ ರಾತ್ರಿಯೂ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದಾಗ ತಾಯಿ ಆತನಿಗೆ ಬುದ್ಧಿವಾದ ಹೇಳಿದ್ದಾರೆ.

*ತಕ್ಷಣದ ನಿರ್ಧಾರ :* “ಮೊಬೈಲ್ ಸಾಕು ಮಾಡಿ ಓದಿಕೊಳ್ಳುವತ್ತ ಗಮನ ಹರಿಸು” ಎಂದು ಹೇಳಿದ ತಾಯಿ ಆತನ ಕೈಲಿದ್ದ ಫೋನ್ ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ, ತಕ್ಷಣ ತನ್ನ ಕೋಣೆಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ.

*ದೃಶ್ಯ ಕಂಡು ಪೋಷಕರು ಶಾಕ್:* ಸುಮಾರು 15-20 ನಿಮಿಷಗಳಾದರೂ ಮಗ ಹೊರಗೆ ಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

*ಪೊಲೀಸ್ ಕಮಿಷನರ್ ಸಲಹೆ:*
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ: ಮಕ್ಕಳು ಅಡಿಕ್ಷನ್‌ಗೆ ಒಳಗಾಗಿದ್ದರೆ ತಕ್ಷಣವೇ ಮೊಬೈಲ್ ಕಿತ್ತುಕೊಳ್ಳುವ ಬದಲು, ನಿಧಾನವಾಗಿ ಅದರಿಂದ ಹೊರಬರುವಂತೆ ಮಾಡಬೇಕು. ವ್ಯಸನ ಹೆಚ್ಚಾಗಿದ್ದರೆ ಶಿಕ್ಷಕರು ಅಥವಾ ಮಕ್ಕಳ ತಜ್ಞರ ಜೊತೆ ಸಮಾಲೋಚನೆ ನಡೆಸಿ. ಮೊಬೈಲ್ ಅನ್ನು ಜ್ಞಾನಾರ್ಜನೆ ಅಥವಾ ಹೊಸ ಕೌಶಲ್ಯ ಕಲಿಯಲು ಬಳಸುವಂತೆ ಪ್ರೇರೇಪಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು