10:44 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಜೈಲ್ ಜಾಮರ್ ನಿಂದ ನೆಟ್ ವರ್ಕ್ ಢಮಾರ್: ನಾಳೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಸ್ತೆತಡೆ ಪ್ರತಿಭಟನೆ

04/04/2025, 20:12

ಮಂಗಳೂರು(reporterkarnataka.com): ನಗರದ ಬಿಜೈಯಲ್ಲಿರುವ ಸಬ್
ಜೈಲ್‌ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮ‌ರ್
ತೆರವುಗೊಳಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ಶಾಸಕ ಡಿ. ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಸ್ತೆ ತಡೆಯ ಪ್ರತಿಭಟನೆ ಏ. 5ರಂದು ಬೆಳಗ್ಗೆ 11 ಗಂಟೆಗೆ ಜೈಲಿನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಾಮರ್ ನಿಂದಾಗಿ ಕಳೆದ ಕೆಲವು ವಾರಗಳಿಂದ ಸ್ಥಳೀಯ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ.
ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಂತೂ ನಾಗರಿಕರು ಬೀದಿಗೆ ಇಳಿಯದಿದ್ದರೆ ಅದೆಂತಹದೇ ಸಮಸ್ಯೆಯಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಜಾಮರ್ ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಬೀದಿಗೆ ಇಳಿಯುವುದು ಅನಿವಾರ್ಯವಾಗಿದ್ದು, ರಸ್ತೆ ತಡೆಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರ ಪರವಾಗಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಸ್ಥಳೀಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಒಗ್ಗೂಡಿ ಭಾಗವಹಿಸುವ ಮೂಲಕ ತಮ್ಮ ಸಹನೆಗೂ ಒಂದು ಮಿತಿ ಇದೆ ಎಂಬುದನ್ನು ಅಧಿಕಾರಶಾಹಿಗಳಿಗೆ ಅರ್ಥ ಮಾಡಿಸಿ ನಿದ್ರೆಯಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಎಚ್ಚರಿಸೋಣ ಎಂದು ಶಾಸಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು