3:33 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಹಾಕಿ ಅಕಾಡೆಮಿ ಸ್ಥಾಪನೆಗೆ ಸಂಪೂರ್ಣ ಸಹಕಾರ: ಕೇಂದ್ರ ಕ್ರೀಡಾ ಸಚಿವ ಡಾ.ಮನ್ಸೂಕ್ ಮಾಂಡವಿಯಾ

02/05/2026, 20:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಕ್ರೀಡಾ ಬೆಳವಣಿಗೆಯ ನಿಟ್ಟಿನಲ್ಲಿ ಕೇಂದ್ರ ಕ್ರೀಡಾ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ದವಾಗಿದೆ. ಕೊಡಗಿನಲ್ಲಿ ಹಾಕಿ ಅಕಾಡೆಮಿ ಸ್ಥಾಪಿಸಿದ್ದೇ ಆದಲ್ಲಿ ಕೇಂದ್ರ ಸಕಾ೯ರದಿಂದ ಎಲ್ಲಾ ಸೌಲಭ್ಯ ನೀಡಲು ಬದ್ದ ಎಂದು ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸೂಕ್ ಮಾಂಡವಿಯಾ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಆಯೋಜಿತ 26ನೇ ವಷ೯ದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯಾಟದ ಸಭಾ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.
ಕ್ರೀಡೆಯನ್ನು ಕ್ರೀಡಾಪಟುಗಳ ಉತ್ತೇಜನಕ್ಕೆ ಬಳಸಬೇಕೇ ವಿನಾ ರಾಜಕೀಯಕ್ಕೆ ಬಳಸಬಾರದು ಎಂದು ಅಭಿಪ್ರಾಯಪಟ್ಟ ಸಚಿವರು, ಗ್ರಾಮೀಣ ಪ್ರದೇಶ ಸೇರಿದಂತೆ ಭಾರತದಾದ್ಯಂತಲಿನ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಕರೆ ನೀಡಿದರು.
ಪ್ರತಿಭೆ ಎಂಬುದನ್ನು ಗೋಲುಗಳ ಆಧಾರದಲ್ಲಿ ಪರಿಗಣಿಸದೇ ಕ್ರೀಡಾಕೌಶಲ್ಯದ ಆಧಾರದಲ್ಲಿ ಗಮನಿಸಬೇಕೆಂದು ಸಚಿವರು ನುಡಿದರು.
ಮುಂದಿನ ವಷ೯ಗಳಲ್ಲಿ ಒಲಂಪಿಕ್ ಕ್ರೀಡಾಕೂಟ ಆಯೋಜನೆ ನಿಟ್ಟಿನಲ್ಲಿ ಕೇಂದ್ರ ಸಕಾ೯ರ ಯೋಜನೆ ರೂಪಿಸುತ್ತಿದೆ ಎಂದೂ ಕ್ರೀಡಾ ಸಚಿವರಾದ ಸಚಿವ ಡಾ. ಮನ್ಸೂಕ್ ಮಾಂಡವಿಯಾ ಈ ಸಂದಭ೯ ಹೇಳಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಭಾರತದ ಕ್ರೀಡಾಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರವಾಗಿದ್ದು ಕೊಡಗು ಜಿಲ್ಲೆಯ ಬಾಡಗ ಗ್ರಾಮದಲ್ಲಿ 12 ಎಕ್ರೆ ಜಾಗದಲ್ಲಿ ನಿಮಾ೯ಣವಾಗುತ್ತಿರುವ ಸುಸಜ್ಜಿತ ಕ್ರೀಡಾ ಸಂಕೀಣ೯ಕ್ಕೆ ಕೇಂದ್ರ ಕ್ರೀಡಾ ಇಲಾಖೆಯಿಂದ ಸೂಕ್ತ ಅನುದಾನ ನೀಡುವಂತೆ ಕೋರಿದರು.

ಸಂಸದ ಯದುವೀರ್ ಒಡೆಯರ್, ಮಾತನಾಡಿ, ಕೊಡವ ಕೌಟುಂಬಿಕ ಹಾಕಿ ಮೂಲಕ ಕೊಡವ ಸಮುದಾಯದ ಸೌಹಾದ೯ತೆ ಹೆಚ್ಚಾಗಿದೆ. ದೇಶದಲ್ಲಿಯೇ ಈ ಪಂದ್ಯಾಟ ಗಮನ ಸೆಳೆದಿದೆ ಎಂದರು.
ಸವೋ೯ಚ್ಚ ನ್ಯಾಯಾಲಯದ ನಿವೖತ್ತ ನ್ಯಾಯಾಧೀಶ ಎ. ಬೋಪಣ್ಣ, ಕನಾ೯ಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಿ.ಕೆ.ಬೋಪಣ್ಣ , ಚೇನಂಡ ಕುಟುಂಬದ ಪ್ರಮುಖರೂ ಸೇರಿದಂತೆ ಗಣ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು