8:07 PM Saturday2 - May 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಹಾಕಿ ಅಕಾಡೆಮಿ ಸ್ಥಾಪನೆಗೆ ಸಂಪೂರ್ಣ ಸಹಕಾರ: ಕೇಂದ್ರ ಕ್ರೀಡಾ ಸಚಿವ ಡಾ.ಮನ್ಸೂಕ್ ಮಾಂಡವಿಯಾ

02/05/2026, 20:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಕ್ರೀಡಾ ಬೆಳವಣಿಗೆಯ ನಿಟ್ಟಿನಲ್ಲಿ ಕೇಂದ್ರ ಕ್ರೀಡಾ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ದವಾಗಿದೆ. ಕೊಡಗಿನಲ್ಲಿ ಹಾಕಿ ಅಕಾಡೆಮಿ ಸ್ಥಾಪಿಸಿದ್ದೇ ಆದಲ್ಲಿ ಕೇಂದ್ರ ಸಕಾ೯ರದಿಂದ ಎಲ್ಲಾ ಸೌಲಭ್ಯ ನೀಡಲು ಬದ್ದ ಎಂದು ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸೂಕ್ ಮಾಂಡವಿಯಾ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಆಯೋಜಿತ 26ನೇ ವಷ೯ದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯಾಟದ ಸಭಾ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.
ಕ್ರೀಡೆಯನ್ನು ಕ್ರೀಡಾಪಟುಗಳ ಉತ್ತೇಜನಕ್ಕೆ ಬಳಸಬೇಕೇ ವಿನಾ ರಾಜಕೀಯಕ್ಕೆ ಬಳಸಬಾರದು ಎಂದು ಅಭಿಪ್ರಾಯಪಟ್ಟ ಸಚಿವರು, ಗ್ರಾಮೀಣ ಪ್ರದೇಶ ಸೇರಿದಂತೆ ಭಾರತದಾದ್ಯಂತಲಿನ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಕರೆ ನೀಡಿದರು.
ಪ್ರತಿಭೆ ಎಂಬುದನ್ನು ಗೋಲುಗಳ ಆಧಾರದಲ್ಲಿ ಪರಿಗಣಿಸದೇ ಕ್ರೀಡಾಕೌಶಲ್ಯದ ಆಧಾರದಲ್ಲಿ ಗಮನಿಸಬೇಕೆಂದು ಸಚಿವರು ನುಡಿದರು.
ಮುಂದಿನ ವಷ೯ಗಳಲ್ಲಿ ಒಲಂಪಿಕ್ ಕ್ರೀಡಾಕೂಟ ಆಯೋಜನೆ ನಿಟ್ಟಿನಲ್ಲಿ ಕೇಂದ್ರ ಸಕಾ೯ರ ಯೋಜನೆ ರೂಪಿಸುತ್ತಿದೆ ಎಂದೂ ಕ್ರೀಡಾ ಸಚಿವರಾದ ಸಚಿವ ಡಾ. ಮನ್ಸೂಕ್ ಮಾಂಡವಿಯಾ ಈ ಸಂದಭ೯ ಹೇಳಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಭಾರತದ ಕ್ರೀಡಾಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರವಾಗಿದ್ದು ಕೊಡಗು ಜಿಲ್ಲೆಯ ಬಾಡಗ ಗ್ರಾಮದಲ್ಲಿ 12 ಎಕ್ರೆ ಜಾಗದಲ್ಲಿ ನಿಮಾ೯ಣವಾಗುತ್ತಿರುವ ಸುಸಜ್ಜಿತ ಕ್ರೀಡಾ ಸಂಕೀಣ೯ಕ್ಕೆ ಕೇಂದ್ರ ಕ್ರೀಡಾ ಇಲಾಖೆಯಿಂದ ಸೂಕ್ತ ಅನುದಾನ ನೀಡುವಂತೆ ಕೋರಿದರು.

ಸಂಸದ ಯದುವೀರ್ ಒಡೆಯರ್, ಮಾತನಾಡಿ, ಕೊಡವ ಕೌಟುಂಬಿಕ ಹಾಕಿ ಮೂಲಕ ಕೊಡವ ಸಮುದಾಯದ ಸೌಹಾದ೯ತೆ ಹೆಚ್ಚಾಗಿದೆ. ದೇಶದಲ್ಲಿಯೇ ಈ ಪಂದ್ಯಾಟ ಗಮನ ಸೆಳೆದಿದೆ ಎಂದರು.
ಸವೋ೯ಚ್ಚ ನ್ಯಾಯಾಲಯದ ನಿವೖತ್ತ ನ್ಯಾಯಾಧೀಶ ಎ. ಬೋಪಣ್ಣ, ಕನಾ೯ಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಿ.ಕೆ.ಬೋಪಣ್ಣ , ಚೇನಂಡ ಕುಟುಂಬದ ಪ್ರಮುಖರೂ ಸೇರಿದಂತೆ ಗಣ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು