5:20 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೇ ಅಂತ್ಯಕ್ರಿಯೆ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್‌

27/11/2025, 12:20

ಬೆಂಗಳೂರು(reporterkarnataka.com): ಮೃತದೇಹಗಳನ್ನು ಗೊತ್ತುಪಡಿಸಿದ ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೆ ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ.
ಸೊಸೆ ಶವವನ್ನು ಮನೆ ಬಳಿ ಹೂಳಲಾಗಿದ್ದು, ಅದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಸೂಚನೆ ನೀಡಿದೆ. ಎಲ್ಲೆಂದರಲ್ಲಿ ಸಮಾಧಿ ಮಾಡುವುದು ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ನ್ಯಾಯಪೀಠ ತಿಳಿಸಿದೆ.
ತಮ್ಮ ಒಪ್ಪಿಗೆಯಿಲ್ಲದೆ ಸೊಸೆಯ ಶವವನ್ನು ಮನೆ ಬಳಿ ಹೂಳಲಾಗಿದ್ದು, ಸಮಾಧಿ ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಲು ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಎಚ್‌.ಗೋಪಾಲಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ, ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಮೃತದೇಹಗಳನ್ನು ಎಲ್ಲೆಂದರಲ್ಲಿ ಸಮಾಧಿ ಮಾಡುವುದು ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ಅಲ್ಲದೆ, ಈ ಪ್ರಕರಣ ಒಂದು ಶವ ಸಮಾಧಿ ಮಾಡುವುದು ಮಾತ್ರವಲ್ಲ. ಅಂತಹ ಚಟುವಟಿಕೆಗಳಿಗೆ ಅವಕಾಶ ನೀಡಿದಲ್ಲಿಗಂಭೀರ ಪರಿಣಾಮ ಬೀರಲಿದೆ. ಅಲ್ಲದೆ, ಎಲ್ಲೆಂದರಲ್ಲಿ ಸಮಾಧಿ ಮಾಡುವುದಕ್ಕೆ ಅವಕಾಶ ಸಿಕ್ಕಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಲಿದೆ ಎಂದು ನ್ಯಾಯಾಲಯ ತಿಳಿಸಿದೆ.
ಸಮಾಧಿ ಸ್ಥಳ ಹೊರತುಪಡಿಸಿ ಬೇರೆ ಸ್ಥಳದಲ್ಲಿ ಶವ ಹೂಳಲು ಅವಕಾಶವಿಲ್ಲ. ಅದಕ್ಕೆ ಅವಕಾಶ ನೀಡಿದಲ್ಲಿ ಮುಂದೊಂದು ದಿನ ಕೊಲೆ ಪ್ರಕರಣಗಳಲ್ಲಿಯೂ ಮುಂದುವರೆಯುವ ಸಾಧ್ಯತೆಯಿರಲಿದೆ. ಜತೆಗೆ, ಇದರಿಂದ ಎದುರಾಗುವ ಪರಿಣಾಮಗಳನ್ನು ಅರ್ಥ ಮಾಡಿಕೊಳ್ಳಬೇಕು. ಇಂತಹ ಕೃತ್ಯಗಳಿಗೆ ಅನುಮತಿ ನೀಡಿದಲ್ಲಿ ಬೇರೊಬ್ಬ ವ್ಯಕ್ತಿ ಮತ್ತೊಬ್ಬರ ಆಸ್ತಿಯಲ್ಲಿ ಶವ ಹೂಳುವುದಕ್ಕೆ ಕಾರಣವಾಗಲಿದೆ. ಆದ್ದರಿಂದ ಗೊತ್ತುಪಡಿಸಿದ ಸ್ಮಶಾನದಲ್ಲಿ ಮಾತ್ರ ದಹನ ಮಾಡಬೇಕು. ಅದನ್ನು ಹೊರತುಪಡಿಸಿ ಇತರೆಡೆಗಳಲ್ಲಿ ಯಾರನ್ನೂ ಅಂತ್ಯಕ್ರಿಯೆ ಮಾಡುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು