8:16 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಗದಗ: 6ನೇ ರಾಜ್ಯಮಟ್ಟದ ಸಾಂಸ್ಕೃತಿಕ ಸಮ್ಮೇಳನ: ಕರ್ನಾಟಕ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ

18/07/2023, 18:47

ಗುರುರಾಜ್ ಕಾಸರಗೋಡು

info.reporterkarnataka@gmail.com

ಬೆಂಗಳೂರಿನ ಮನೋಹರ ನಾಯಕ ನೇತ್ರತ್ವದ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸಂಸ್ಥೆಯ 6ನೇ ರಾಜ್ಯ ಮಟ್ಟದ ಸಾಂಸ್ಕೃತಿಕ ಸಮ್ಮೇಳನ ಗದಗದ ಡಾ.ಬಿ. ಆರ್. ಅಂಬೇಡ್ಕರ ಸಭಾಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸುಂದರ ಸಮ್ಮೇಳನವು ಗದಗ ಜಿಲ್ಲೆಯ ಪ್ರಸಿದ್ಧ ಸಾಹಿತಿ ಎಫ್. ಪಿ. ಲಕ್ಷ್ಮೇಶ್ವರಮಠ ‌ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಿತು.


ಈ ಸಮಾರಂಭದ ಉದ್ಘಾಟನೆಯನ್ನು ಜ್ಞಾನಯೋಗಶ್ರಮ ವಿಜಯಪುರದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಕಪ್ಪತ್ತಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠ ಡೋಣಿ ಗದಗದ ಶ್ರೀ ಮಾ ನಿ ಪ್ರ ಶಿವಕುಮಾರ ಮಹಾಸ್ವಾಮಿಗಳು, ಶ್ರೀ ದೊರೆಸ್ವಾಮಿ ವೀರಕ್ತ ಮಠ ಬೈರನ ಹಟ್ಟಿ ನರಗುಂದದ ಶ್ರೀ ಮಾ ನಿ ಪ್ರ ಶಾಂತಲಿಂಗ ಮಹಾಸ್ವಾಮಿಗಳು ಅವರ ಉಪಸ್ಥಿತಿಯಲ್ಲಿ ನಡೆಯಿತು. ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಮನೋಹರ ನಾಯಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಸಮಾರಂಭದ ಮುಖ್ಯ ಬಿಂದುವಾಗಿ ಗದಗ ಜಿಲ್ಲೆಯ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ್ ಅವರು ಭಾಗವಹಿಸಿ ಹಿತ ನುಡಿಗಳನ್ನಾಡಿದರು. ಹೀಗೆ ಹಲವಾರು ಗಣ್ಯಾತಿಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಭವ್ಯ ಸಮ್ಮೇಳನದಲ್ಲಿ ಸಂಸ್ಥೆಯ ಗದಗ ಜಿಲ್ಲಾ ಘಟಕದ ಉದ್ಘಾಟನೆ, ಪದಾಧಿಕಾರಿಗಳ ಸೇವಾದೀಕ್ಷೆ, ಕವಿಪೀಠ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ, ಸರ್ವಾಧ್ಯಕ್ಷರ ಬದುಕು ಬರಹ ಕೈಪಿಡಿ ಬಿಡುಗಡೆ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರಾಜ್ಯದ ಮೂಲೆ ಮೂಲೆಗಳಿಂದ ಬಂದಂತ ಹಲವಾರು ಕ್ಷೇತ್ರದ ಸಾಧಕರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ನೆರೆದಿರುವ ಸರಿ ಸುಮಾರು ಸಾವಿರಾರು ಕಲಾರಾಧಕ ಮನಸ್ಸುಗಳ ಸಮ್ಮುಖದಲ್ಲಿ ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕರ್ನಾಟಕದ ಗಡಿ ಪ್ರದೇಶವಾದ ಕಾಸರಗೋಡು ಜಿಲ್ಲೆಯಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಾ, ಹಲವಾರು ಕಲಾವಿದರಿಗೆ ವೇದಿಕೆ ಅವಕಾಶ ನೀಡಿ ಗುರುತಿಸಿ ಪ್ರಶಸ್ತಿ ಪುರಸ್ಕಾರ ನೀಡಿ ಅವರ ಕಲೆಗೆ ಗಟ್ಟಿ ಪ್ರೋತ್ಸಾಹ ನೀಡುತ್ತಾ ಗಡಿನಾಡಿನಲ್ಲಿ ಕನ್ನಡದ ಕಂಪನ್ನು ಹರಡಿಸುತ್ತಿರುವ ಗಡಿನಾಡ ಕನ್ನಡತಿ ಡಾ. ವಾಣಿಶ್ರೀ ಕಾಸರಗೋಡು ಇವರನ್ನು ” ಕರ್ನಾಟಕ ಸಾಂಸ್ಕೃತಿಕ ರತ್ನ ” ಎಂಬ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ವಿಶೇಷವಾಗಿ ರಾಜರ ಕಾಲದ ಕವಿಗೋಷ್ಠಿಯ ತರಹ ಪ್ರತಿಯೊಂದು ಕವಿಯನ್ನು ಪೀಠದ ಮೇಲೆ ಕುಳ್ಳಿರಿಸಿ ವಿಶೇಷವಾಗಿ ಗೌರವಸಿ ಕವನವನ್ನು ವಾಚಿಸಲಾಯಿತು. ಗಾಯನ, ನೃತ್ಯ, ಬುಡಕಟ್ಟು ಜನಾಂಗದವರಿಂದ ವಿದ ವಿದವಾದ ಬಂಜಾರ ನೃತ್ಯ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ವೈಭವವಾಗಿ ನೆರವೇರಿದವು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮನೋಹರ ನಾಯಕ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು