5:57 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ಗಡಿನಾಡಿನಲ್ಲಿ ಕನ್ನಡ ಮತ್ತು ಜಾನಪದ ಒಟ್ಟೋಟ್ಟಿಗೆ ಸಾಗಿ ಬೆಳವಣಿಗೆಯಾಗಬೇಕು: ಎನ್.ಎಂ.ಲಕ್ಷ್ಮಣ್

10/11/2024, 18:15

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಗಡಿನಾಡಿನಲ್ಲಿ ಕನ್ನಡ ಮತ್ತು ಜಾನಪದ ಒಟ್ಟೋಟ್ಟಿಗೆ ಸಾಗಿ ಬೆಳವಣಿಗೆಯಾಗಬೇಕು. ಬಹುಭಾಷಾ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮೂಲ ಸಂಸ್ಕೃತಿಗಳು ಕನ್ನಡತನವನ್ನು ಧಕ್ಕಿಸಿಕೊಳ್ಳಬೇಕು ಎಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಡ್ರಾಮ ನಿರ್ದೇಶಕ ಎನ್.ಎಂ.ಲಕ್ಷ್ಮಣ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶ್ರೀನಿವಸಪುರದ ಶ್ರೀ ಶಾರದಾಂಬ ಕಲಾ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.
ಶ್ರೀ ಶಾರದಾಂಬ ಕಲಾ ಟ್ರಸ್ಟ್ ಸುಮಾರು 17 ವರ್ಷದಿಂದ ಕನ್ನಡ ಪರ ಕಾರ್ಯಕ್ರಮಗಳು ನೆರವೇರಿಸಿಕೊಂಡು ಬರುತ್ತದೆ ಎಂದು ಹೇಳಿದರು. ಕಾರ್ಯದರ್ಶಿ ಶಿವರಾಮ ಶರ್ಮ ಮಾತನಾಡಿ, ಗಡಿನಾಡು ಪ್ರದೇಶದಲ್ಲಿ ಯಕ್ಕಡ,ಎನ್ನಡ ಭಾಷೆಗಳ ಮದ್ಯ ಕನ್ನಡ ಬಾಷೆಯು ನಲುಗುತ್ತಿದ್ದು , ಯುವ ಜನತೆ ಇತರೆ ಬಾಷೆಯಲ್ಲಿನ ಮಾಹಿತಿಯನ್ನು ವಾಟ್ಸ್ಪ್, ಫೇಸ್‌ಬುಕ್, ಯುಟ್ಯೂಬ್‌ಗಳಲ್ಲಿ ನೋಡುವುದರ ಮೂಲಕ ಕಾಲಕಳೆಯುವುದನ್ನು ಬಿಟ್ಟು , ಅದೇ ಸಮಯವನ್ನು ಕನ್ನಡ ಬಾಷೆ, ಸಾಹಿತ್ಯ, ಕವಿಪುಂಗವರ ಬಗ್ಗೆ, ಕನ್ನಡ ಭಾಷೆಗಾಗಿ ಹೋರಾಡಿದ ಮಹನೀಯರ, ಕನ್ನಡ ಬಾಷೆಯ ಸುಮಧರ ಹಾಡುಗಳನ್ನು ವಾಟ್ಸಾಪ್, ಫೇಸ್‌ಬುಕ್ , ಯುಟ್ಯೂಬ್‌ಗಳಲ್ಲಿ ಒಬ್ಬರಿಗೊಬ್ಬರು ರವಾನಿಸುವುದರ ಮೂಲಕ ಬಾಷೆಯ ಉಳಿವಿಗಾಗಿ ಶ್ರಮಿಸುವಂತೆ ಮನವಿ ಮಾಡಿದರು.
ಶ್ರೀ ಶಾರದಂಬ ಕಲಾ ಟ್ರಸ್ಟ್ ಖಜಾಂಚಿ ಡಿ.ಸಿ. ಶಂಕರರೆಡ್ಡಿ ಕಾರ್ಯಕ್ರಮದ ವಂದನಾರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರು ಎನ್‌ ವಿಜಯಮ್ಮ ಶ್ರೀಶಾರದಾಂಬ ಕಲಾ ಟ್ರಸ್ಟ್ ಅಧ್ಯಕ್ಷ ತಂರ್ತಾಲಪಲ್ಲಿ ಸೋಮಣ್ಣ, ಖಜಾಂಚಿ ಡಿ.ಸಿ.ಶಂಕರರೆಡ್ಡಿ, ನಾರಾಯಣಸ್ವಾಮಿ ,ಸಾಂಸ್ಕೃತಿಕ ಕಾರ್ಯದರ್ಶಿ ಕಲಾ ಶಂಕರ್, ಪೊಲೀಸ್ ನಿವೃತ್ತ ಸಹಾಯಕ ಸಬ್ ಇನ್ಸ್ಪೆಕ್ಟರ್ ರವೀಂದ್ರ,ಡ್ರಾಮ ಗುರುಗಳಾದ ಬತ್ತಲಗುಟ್ಲಪಲ್ಲಿ ರಾಮಮೂರ್ತಿ, ಕೃಷ್ಣಮೂರ್ತಿನಾಯಕ್, ತಬಲವಾದಕ ಪರ‍್ನಪಲ್ಲಿ ನಾಗೇಶ್, ರಾಮಕೃಷ್ಣಾರೆಡ್ಡಿ, ಮೈಕಲ್ ವೆಂಕಟರಣ, ಚಲಪತಿ, ರಾಮ ಮೂರ್ತಿ, ತಿಪ್ಪಣ್ಣ, ಹೋಹಳ್ಳಿ ಕೃಷ್ಣಪ್ಪ, ಆಂಜಪ್ಪ , ಪದ್ಮಾವತಮ್ಮ, ಶಕುಂತಲಮ್ಮ, ಕಲಾವಿದರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು