9:36 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗಡಿಭಾಗದ ಗ್ರಾಮದಲ್ಲಿ ಅರಳಿದ ಭಗವಾನ್ ಬುದ್ಧ ಪ್ರತಿಮೆ: ಮೈಸೂರು ಜಿಲ್ಲೆಗೆ ಮಾದರಿಯದ ಯಶವಂತಪುರ ಗ್ರಾಮ

03/02/2024, 18:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತಿಹಾಸ ಪ್ರಸಿದ್ಧ ಪವಾಡಪುರುಷ ಶ್ರೀ ಬೇಲದ ಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯದ ಸಮೀಪವಿರುವ ಸರಗೂರು ತಾಲೂಕಿನ ಯಶವಂತಪುರ ಗ್ರಾಮದಲ್ಲಿ ಗ್ರಾಮಸ್ಥರು ಸಾಮೂಹಿಕವಾಗಿ ಭಗವಾನ್ ಬುದ್ಧ ಮೂರ್ತಿ ಪ್ರತಿಷ್ಠಾಪನೆ ಮಾಡಿ ಮೈಸೂರು ಜಿಲ್ಲೆಗೆ ಮಾದರಿಯಾಗಿದ್ದಾರೆ.
ಸುಮಾರು 3 ಅಡಿ ಎತ್ತರವಿರುವ ಕಂಚಿನ ಭಗವಾನ್ ಬುದ್ಧ ಪ್ರತಿಮೆಯನ್ನು ಚಾಮರಾಜನಗರ ಜಿಲ್ಲೆಯ ಭೋದಿ ಬಂತೇಜಿ ಅವರು ಗೌತಮ ಬುದ್ಧರ ವಿಚಾರಗಳನ್ನು ಬೋಧಿಸುವ ಮೂಲಕ ಪ್ರತಿಷ್ಠಾಪಿಸಿದರು. ಭಾರತದಲ್ಲಿ ಜನ್ಮ ತಾಳಿದ ಭಗವಾನ್ ಬುದ್ಧ ಮಹಾರಾಜರಿಗೆ 34 ವರ್ಷಗಳ ಬಳಿಕ ಜ್ಞಾನೋದಯವಾಗಿ ಅವರು ನೀಡಿದ ಸಂದೇಶಗಳನ್ನು ಸಾಕಷ್ಟ ರಾಷ್ಟ್ರಗಳು ಅನುಸರಿಸುತ್ತ ಬಂದಿವೆ.
ಬುದ್ಧನ ನಾಡಿನಲ್ಲಿ ಹುಟ್ಟಿದ ನಾವೆಲ್ಲ ಧನ್ಯರು ಬುದ್ಧರ ಮಾರ್ಗದಲ್ಲಿ ನಡೆದು ದೇಶಕ್ಕೆ ಬೆಳಕಾಗಬೇಕು ಎಂದು ಬೋಧಿ ಬಂತೆಜಿ ತಿಳಿಸಿದರು ದರು.
ಹುಣಸೂರು ಮೂಲದ ಶೈಲಜಾ ಮಹದೇವಸ್ವಾಮಿ ಎಂಬ ದಾನಿಗಳು ಬೆಲೆಬಾಳುವ ಬುದ್ಧ ಮೂರ್ತಿಯನ್ನು ಕೊಡುಗೆಯಾಗಿ ನೀಡಿದ್ದಾರೆ ಯಶವಂತಪುರ ಗ್ರಾಮದ ದೊಡ್ಡ ಯಜಮಾನರಾದ ನಿವೃತ್ತ ಪೊಲೀಸ್ ಅಧಿಕಾರಿ ಶ್ರೀಯುತ ಮರಿಸ್ವಾಮಿ ಚಿಕ್ಕ ಯಜಮಾನ್ರು ಮಲ್ಲೇಶ್ ವುಮೇನ್ ರೈಟ್ಸ್ ತಾಲೂಕು ಅಧ್ಯಕ್ಷರಾದ ಯಶವಂತಪುರ ಶ್ರೀನಿವಾಸ್ ಗ್ರಾಪಂ ಸದಸ್ಯ ಶಿವಲಿಂಗಯ್ಯ ಸೇರಿದಂತೆ ಗ್ರಾಮದ ಮುಖಂಡರು ಒಮ್ಮತದಿಂದ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಸಮುದಾಯ ಭವನದಲ್ಲಿ ಬುದ್ಧ ಪ್ರತಿಮೆ ಸ್ಥಾಪಿಸಿ ಸಂಭ್ರಮಿಸಿದರು. ಯಶವಂತಪುರ ಗ್ರಾಮದ ಮುಂದಿನ ಪೀಳಿಗೆಗೆ ಅನುಕೂಲಕರವಾಗುವ ದೆಸೆಯಿಂದ ಪ್ರೀತಿ ಸಹನೆ ಸಹಬಾಳ್ವೆಯಿಂದ ಬದುಕು ರೂಪಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಉತ್ತಮ ಸಂದೇಶ ನೀಡುವ ಸಲುವಾಗಿ ಬುದ್ಧ ಪ್ರತಿಮೆ ಸ್ಥಾಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಉತ್ತಮವಾದ ಹೈಟೆಕ್ ಗ್ರಂಥಾಲಯವನ್ನು ಕೂಡ ತೆರೆದು ಮಕ್ಕಳ ಭವಿಷ್ಯಕ್ಕೆ ದಾರಿಯಾಗುವುದರ ಜೊತೆಗೆ ಗ್ರಾಮದಲ್ಲಿ ಭಗವಾನ್ ಬುದ್ಧರ ಬೆಳಕನ್ನು ಸದಾ ಕಾಣುವ ದೃಷ್ಟಿಯಿಂದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುದ್ಧ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಶ್ರೀನಿವಾಸ್ ಸಂದರ್ಭದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಾಮರಾಜನಗರ ಮೂಲದ ಭೋದಿ ಬಂತೆಜೀಗಳು ಬುದ್ಧರ ಹಿತವಚನಗಳನ್ನು ಸಾರ್ವಜನಿಕರಿಗೆ ತಿಳಿಸಿದರು ಕಾರ್ಯಕ್ರಮದಲ್ಲಿ ಎಚ್. ಡಿ. ಕೋಟೆ, ನಂಜನಗೂಡು ಮತ್ತು ಸರಗೂರು ತಾಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ವಿಚಾರವಾದಿಗಳು ಕಾರ್ಯಕ್ರಮದಲ್ಲಿ ಮಾತನಾಡಿದರು.


ಯಶವಂತಪುರ ಗ್ರಾಮದ ಮಹಿಳೆಯರು ಗ್ರಾಮಸ್ಥರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು