6:22 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು