4:35 AM Thursday31 - July 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು