3:03 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು