9:57 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ

16/11/2023, 21:12

ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರಾಟ ಮಾಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.
ಹಿಂದೂ ಕುಟುಂಬಗಳಿಗೆ ಅದರಲ್ಲೂ ಅಪ್ರಾಪ್ತ ಹಿಂದೂ ಯುವತಿಯನ್ನು ಅನ್ಯಮತೀಯ ಪುಸಲಾಯಿಸಿ ಜೀವನ ಹಾಳು ಮಾಡುವುದನ್ನು ತಡೆದ ನಾಲ್ವರು ಹಿಂದೂ ಯವ ಕಾರ್ಯಕರ್ತರ ಮೇಲೆ ಅಪಹರಣ ಕೇಸು ದಾಖಲು ಮಾಡಿ ಪೊಲೀಸ್ ಇಲಾಖೆ ಮೂಲಕ ದಬ್ಬಾಳಿಕೆ ಮಾಡುತ್ತಿದೆ.
ಹಿಂದೂ ಯುವತಿಯರ ನೆರವಿಗೆ ಬರುವ ಹಿಂದೂ ಕಾರ್ಯಕರ್ತರನ್ನು ಕ್ರಿಮಿನಲ್ ಗಳಂತೆ ಕಾಂಗ್ರೆಸ್ ಸರಕಾರ ನೋಡುತ್ತಿದೆ.
ಹಿಂದೂ ಮುಖಂಡರು, ಕಾರ್ಯಕರ್ತರು ಕಾರಣವಿಲ್ಲದೆ ಯಾರದೇ ತಂಟೆಗೆ ಹೋಗುವುದಿಲ್ಲ.ಆದರೆ ಹಿಂದೂ ಸಮಾಜದ ಅಸ್ಮಿತೆಗೆ ದಕ್ಕೆ ಬಂದಾಗ ಹೋರಾಟ ಮಾಡುತ್ತಾರೆ.ಪೊಲೀಸ್ ಠಾಣೆಯಲ್ಲಿ ಈ ಮೂಲಕ ದಾಖಲಾದ ಸಣ್ಣಪುಟ್ಟ ಕೇಸ್ ಆಧಾರವಾಗಿಸಿ ಗಡಿಪಾರು ಆದೇಶ ಮಾಡುವುದನ್ನು ನೋಡಿದರೆ ಹಿಂದೂ ಸಂಘಟನೆಗಳ ಬಗ್ಗೆ ಸರಕಾರಕ್ಕೆ ಭೀತಿಯಿರುವಂತೆ ಕಾಣುತ್ತದೆ. ಪುತ್ತೂರಿನ ಕಾರ್ಯಕರ್ತರ ಗಡಿಪಾರು ಆದೇಶ ಹಿಂಪಡೆಯಬೇಕು ಇಲ್ಲದಿದ್ದಲ್ಲಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು