7:31 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

27/07/2025, 23:09

ಗದಗ(ಲಕ್ಷ್ಮೇಶ್ವರ):reporterkarnataka.comಹೊಸ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಗದಗ ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಅನುಮತಿ ನೀಡುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.


ಅವರು ಇಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ 1008 ಜಗದ್ಗುರು ಶ್ರೀ ವೀರಗಂಗಾಧರ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ ಯಾರ್ಡ್) ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗಣಪತಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆಯ ಕಾರ್ಯಕ್ರಮದ ಹೋಮ, ಹವನ ಮತ್ತು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.
ಇವತ್ತು ನನಗೆ ಬಹಳ ಸಂತೋಷವಾಗಿದೆ ಎಪಿಎಂಸಿಯಲ್ಲಿ ಗಣಪತಿ ದೇವಸ್ಥಾನ ಮಾಡಿದ್ದೀರಿ, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕೊಟ್ಡಿದ್ದಕ್ಕೆ ಧನ್ಯವಾದ. ಗಣಪತಿ ವಿಘ್ನ ನಿವಾರಕ, ಏನೇ ಒಳ್ಳೆಯ ಕೆಲಸ ಮಾಡಬೇಕೆಂದರೆ ಗಣಪತಿಯ ಪೂಜೆ ಮಾಡುತ್ತೇವೆ. ಎಪಿಎಂಸಿ ಯಾರ್ಡ್ ನಲ್ಲಿ ವ್ಯಾಪಾರ ವ್ಯವಹಾರ ಎರಡು ಮೂರು ಪಟ್ಟು ಗಣಪತಿ ಆಶೀರ್ವಾದದಿಂದ ಹೆಚ್ಚಾಗಲಿ, ನೊಣವಿನಕೆರೆ ಹಾಗೂ ಮುಕ್ತಿ ಮಂದಿರದ ಸ್ವಾಮಿಜಿಗಳ ಆಶೀರ್ವಾದ ಇಲ್ಲಿನ ರೈತ ಬಾಂಧವರಿಗೆ ಇರಲಿ. ಆಡಳಿತ ಮಂಡಳಿ ಸಂಪೂರ್ಣ ಶುಭ್ರವಾಗಿರುವ ಜೈಪುರದಿಂದ ಮಕ್ಕಾಣ ಕಲ್ಲಿನಿಂದ ಗಣಪತಿಯ ವಿಗ್ರಹವನ್ನು ಮಾಡಿಸಿಕೊಂಡು ಬಂದಿರುವುದು ವಿಶೇಷ ಭಕ್ತಿಯಾಗಿದೆ. ಅದು ಇಡೇರುತ್ತದೆ‌ ಎಂದು ಹೇಳಿದರು.
ತಮ್ಮೆಲ್ಲರ ಬೇಡಿಕೆ ಕಾರವಾರ ಇಲಕಲ್ ರಸ್ತೆ, ನಿಮ್ಮ ಪ್ರಕಾರ ಗದಗ ಬಂಕಾಪುರ ರಸ್ತೆ ಈಗಾಗಲೇ ಡಿಪಿಆರ್ ಆಗಿದೆ. ಹೊಸ ರಾಷ್ಟ್ರೀಯ ಹೆದ್ದಾರಿಗಳಿಗೆ ಅನುಮತಿ ನೀಡುವುದು ನಿಂತಿರುವುದರಿಂದ ಅದು ಹಾಗೆ ಉಳಿದಿದೆ. ಹೊಸ ಹೈವೆ ಮಾಡುವ ಸಂದರ್ಭದಲ್ಲಿ ಮಾಡಿಕೊಡುವುದಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ, ಖಂಡಿತವಾಗಿ ಅದು ಆಗುತ್ತದೆ. ಗದಗ ಯಲವಿಗಿ ರೈಲು ಸಂಪರ್ಕದ ಕುರಿತು ರೈಲ್ವೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎರಡು ತಿಂಗಳಲ್ಲಿ ಡಿಪಿಆರ್ ಮುಗಿಯುತ್ತದೆ. ದೇಹಲಿಯಿಂದ ಒಪ್ಪಿಗೆ ಪಡೆದುಕೊಂಡು ಬರುತ್ತೇವೆ‌. ಭೂಸ್ವಾಧಿನ ಆದ ತಕ್ಷಣ ಕಾಮಗಾರಿ ಆರಂಭ ಮಾಡುತ್ತೇವೆ. ಈಗಾಗಲೇ ಬಕೆಟ್ ನಲ್ಲಿ 200 ಕೋಟಿ ಮೀಸಲಿಟ್ಡಿದ್ದೇವೆ ಎಂದು ಅವರು ನುಡಿದರು.
ಕಾರ್ಯಕ್ರಮಕ್ಕೆ ತಾಯಂದಿರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಅವರು ಶ್ರದ್ದೆ ಭಕ್ತಿಯಿಂದ ಪೂಜೆ ಮಾಡುತ್ತಾರೆ. ಶುದ್ದ ಮನಸ್ಸಿನಿಂದ ಹೋಮ ಮಾಡಿದ್ದೀರಿ ಅದರ ಫಲ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕಿನ ಜನರಿಗೆ ಸಿಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಮ.ನಿ.ಪ್ರ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಗಳು, ಕಾಡಸಿದ್ದೇಶ್ವರ ಮಠ, ನೊಣವಿನಕೆರೆ ಹಾಗೂ ಶ್ರೀ ಷ.ಬ್ರ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಮುಕ್ತಿಮಂದಿರ ಉಭಯ ಶ್ರೀಗಳು ದಿವ್ಯಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕರಾದ ಡಾ ಚಂದ್ರು ಲಮಾಣಿ, ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ,ಎ.ಪಿ.ಎಂ.ಸಿ ಮರ್ಚೆಂಟ ಅಸೋಸಿಯೇಶನ್ ಅಧ್ಯಕ್ಷರಾದ ಓಂಪ್ರಕಾಶ ಜೈನ ಮುಖಂಡರಾದ ವಿಜಯಕುಮಾರ ಹತ್ತಿಕಾಳ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು