4:46 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ

26/01/2022, 17:51

ಮಂಗಳೂರು(reporterkarnataka.com):  ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡ್‌ಗೆ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ‘ಗುರಿ ತೋರಿದ ಗುರುವಿನ ಕಡೆಗೆ ಸ್ವಾಭಿಮಾನದ ಜಾಥಾ’ ಬುಧವಾರ ನಡೆಯಿತು.


ನಗರದ ಕಂಕನಾಡಿ ಗರೋಡಿ ಕ್ಷೇತ್ರದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಗೆ ಕ್ಷೇತ್ರದ ಅರ್ಚಕರು ಪೂಜೆ ಸಲ್ಲಿಸುವ ಮೂಲಕ ಸ್ವಾಭಿಮಾನ ನಡಿಗೆಗೆ ಚಾಲನೆ ನೀಡಲಾಯಿತು. ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಉಪಸ್ಥಿತಿಯಲ್ಲಿ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು.



ಜಾಥಾ ಆರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಜನಾರ್ಧನ ಪೂಜಾರಿ ಮಾರ್ಗದರ್ಶನದಲ್ಲಿ ನಡೆಯುವ ಈ ನಡಿಗೆ ಇದು ರಾಜಕೀಯ ಪ್ರೇರಿತವಾದ ಹೋರಾಟ ಅಲ್ಲ ಸ್ವಾಭಿಮಾನದ ನಡಿಗೆ. ಪಕ್ಷ, ಧರ್ಮ, ಜಾತಿ ಬೇಧ ಮರೆತು ಹಳದಿ ಶಾಲಿನ ಗೌರವದೊಂದಿಗೆ ನಡೆಯುತ್ತಿದೆ ಎಂದರು.ಶಾಸಕ ಯು.ಟಿ ಖಾದರ್ ಮತ್ತಿರರು ಭಾಗಿಯಾಗಿದ್ದರು.

ಜಾಥಾದಲ್ಲಿ ಘೋಷಣೆಗಳಿರುವುದಿಲ್ಲ. ಯಾರ ವಿರುದ್ಧವೂ ಧಿಕ್ಕಾರ ಕೂಗಲು ಅವಕಾಶವಿಲ್ಲ. ಭಾಗವಹಿಸುವ ವಾಹನಗಳು ನಾರಾಯಣಗುರುಗಳು ಶಾಂತಿಯ ಸಂಕೇತವಾಗಿ ನೀಡಿರುವ ಹಳದಿ ಪತಾಕೆಯನ್ನು ಹಾಗೂ ಭಾಗವಹಿಸುವ ನಾರಾಯಣ ಗುರುಗಳ ಅನುಯಾಯಿಗಳು ಹಳದಿ ಶಾಲು ಮಾತ್ರ ಧರಿಸಲು ಅವಕಾಶವಿರುತ್ತದೆ ಸಂಘಟಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು