10:12 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಗಾಂಧಿ ಪ್ರತಿಮೆಗೆ ನಮಿಸಿ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಇಂಡಿಯ ಒಕ್ಕೂಟದಿಂದ ಭರ್ಜರಿ ಸ್ವಾಗತ

07/08/2023, 14:47

ಹೊಸದಿಲ್ಲಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಾಂಧಿ ಪ್ರತಿಮೆಗೆ ನಮಸ್ಕರಿಸಿ ಸೋಮವಾರ ಸಂಸತ್ತಿಗೆ ಮರು ಪ್ರವೇಶ ಮಾಡಿದರು.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ರಾಹುಲ್ ಗಾಂಧಿ ಅವರಿಗೆ ವಿಧಿಸಿದ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ.
ಸಂಸತ್ತಿಗೆ ಆಗಮಿಸಿದ ರಾಹುಲ್ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ಇಂಡಿಯ ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ರಾಹುಲ್ ಪರ ಘೋಷಣೆಗಳನ್ನು ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು