9:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗಾಂಧಿ ಪ್ರತಿಮೆಗೆ ನಮಿಸಿ ಸಂಸತ್ತಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ಇಂಡಿಯ ಒಕ್ಕೂಟದಿಂದ ಭರ್ಜರಿ ಸ್ವಾಗತ

07/08/2023, 14:47

ಹೊಸದಿಲ್ಲಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗಾಂಧಿ ಪ್ರತಿಮೆಗೆ ನಮಸ್ಕರಿಸಿ ಸೋಮವಾರ ಸಂಸತ್ತಿಗೆ ಮರು ಪ್ರವೇಶ ಮಾಡಿದರು.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿತ್ತು. ರಾಹುಲ್ ಗಾಂಧಿ ಅವರಿಗೆ ವಿಧಿಸಿದ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಅವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದೆ.
ಸಂಸತ್ತಿಗೆ ಆಗಮಿಸಿದ ರಾಹುಲ್ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ಇಂಡಿಯ ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ರಾಹುಲ್ ಪರ ಘೋಷಣೆಗಳನ್ನು ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು