1:28 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ

01/10/2024, 20:35

ಮಂಗಳೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮೂಲಮಂತ್ರಗಳು ವಿಶ್ವದಾದ್ಯಂತದ ಮಾಧ್ಯಮ ವ್ಯಕ್ತಿಗಳಿಗೆ ಮಾತ್ರವಲ್ಲ ಎಲ್ಲಾ ಮನುಷ್ಯರಿಗೆ ಕತ್ತಲಲ್ಲಿ ಮುನ್ನಡೆಸುವ ದಾರಿದೀಪಗಳಾಗಿವೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನಾ ಹೇಳಿದರು. ಅವರು ನಗರದ ಪದುವಾ ಬಳಿಯ ಸಿಒಡಿಪಿಯಲ್ಲಿ ಮಂಗಳವಾರ ನಡೆದ ಇಂಡಿಯನ್ ಕ್ಯಾಥೋಲಿಕ್ ಪ್ರೆಸ್ ಅಸೋಸಿಯೇಷನಿನ 29 ನೇ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗಾಂಧೀಜಿಯವರು ನಮಗೆ ಅನ್ಯರ ಅಭಿಪ್ರಾಯಗಳನ್ನು ಗೌರವಿಸುವ ಪರಂಪರೆಯನ್ನು ಪಾಲಿಸಲು ಕರೆ ನೀಡಿದ್ದಾರೆ. ಆ ಕೋರಿಕೆಯಂತೆ ನಾವೆಲ್ಲರೂ ಜವಾಬ್ದಾರಿಯಿಂದ ಮುಂದುವರೆಯಬೇಕೆಂದು ಹಾಗೂ ಗಾಂಧೀಜಿಯವರಂತೆ ಇಂದಿನ ಎಲ್ಲಾ ಪತ್ರಕರ್ತರು ನಿರ್ಭೀತರೂ ಸತ್ಯಪಕ್ಷಪಾತಿಗಳಾಗಬೇಕೆಂದು ಕರೆ ನೀಡಿದರು.
ಮಾಧ್ಯಮಗಳ ಮೂಲಕ ಸತ್ಯದ ಹುಡುಕಾಟ ನಡೆಯುತ್ತಿದೆಯೇ? ಸತ್ಯ ನೋವು ನೀಡುತ್ತದೆ. ಆದರೆ ಅದು ನಿರ್ಗತಿಕರಿಗೆ ಬಲ ನೀಡುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಹೆನ್ರಿ ಡಿಸೋಜಾರವರು ಮಾತನಾಡಿ, ವಿವಿಧ ಒತ್ತಡಗಳ ನಡುವೆ ಸಿಲುಕಿ ಹೋಗಿರುವ ಇಂದಿನ ಮಾಧ್ಯಮ ಜಗತ್ತಿನಲ್ಲಿ ಗಾಂಧೀಜಿಯವರ ಚಿಂತನೆಗಳು ಅಪ್ರಸ್ತುತ ಎನ್ನುವಂತೆ ಕಾಣುತ್ತಿದೆಯಾದರೂ ವಾಸ್ತವವಾಗಿ ಬೆಳಕಿನ ಅಗತ್ಯವಿರುವುದು ಕತ್ತಲಿನ ನಡುವೆಯೇ ಎನ್ನುವುದನ್ನು ಮರೆಯಬಾರದು. ಇಂತಹ ಗೊಂದಲದ ನಡುವೆಯೇ ಪ್ರಜಾತಂತ್ರದ ಹಾಗೂ ಭಾರತೀಯತೆಯ ಬಲವನ್ನು ಹೆಚ್ಚಿಸಲು ಮಾಧ್ಯಮಗಳ ಪಾತ್ರದ ಕುರಿತು ಗಾಂಧೀಜಿಯವರ ಚಿಂತನೆಗಳನ್ನು ಪುನಃ ನಮ್ಮ ಪತ್ರಿಕೋದ್ಯಮದ ಕೇಂದ್ರ ಭಾಗವಾಗಿಸುವ ಅಗತ್ಯವಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಮಾವೇಶದ ಉದ್ಘಾಟಕರಾಗಿ ಉಪಸ್ಥಿತರಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುಗಳಾದ ಬಹು ವಂದನೀಯ ಮ್ಯಾಕ್ಸಿಮ್ ಎಲ್. ನರೊನ್ಹಾ, ಐಸಿಪಿಎ ಅಧ್ಯಕ್ಷರಾದ ಇಗ್ನೇಷಿಯಸ್ ಗೊನ್ಸಾಲ್ವಿಸ್, ಕಾರ್ಯದರ್ಶಿ ಫಾ. ಸುರೇಶ್ ಮ್ಯಾಥ್ಯೂ, ಕಾರ್ಯಕ್ರಮದ ಸಂಯೋಜಕರಾದ ರಾಕ್ಣೊ ವಾರಪತ್ರಿಕೆಯ ಸಂಪಾದಕರಾದ ವಂದನೀಯ ಫಾದರ್ ರೂಪೇಶ್ ಮಾಡ್ತಾ, ಸಿಒಡಿಪಿ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜಾ ವೇದಿಕೆಯಲ್ಲಿ ಹಾಜರಿದ್ದರು. ದೇಶದ ವಿವಿಧ ರಾಜ್ಯಗಳ ಪತ್ರಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು