4:34 AM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ

01/10/2024, 20:35

ಮಂಗಳೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮೂಲಮಂತ್ರಗಳು ವಿಶ್ವದಾದ್ಯಂತದ ಮಾಧ್ಯಮ ವ್ಯಕ್ತಿಗಳಿಗೆ ಮಾತ್ರವಲ್ಲ ಎಲ್ಲಾ ಮನುಷ್ಯರಿಗೆ ಕತ್ತಲಲ್ಲಿ ಮುನ್ನಡೆಸುವ ದಾರಿದೀಪಗಳಾಗಿವೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನಾ ಹೇಳಿದರು. ಅವರು ನಗರದ ಪದುವಾ ಬಳಿಯ ಸಿಒಡಿಪಿಯಲ್ಲಿ ಮಂಗಳವಾರ ನಡೆದ ಇಂಡಿಯನ್ ಕ್ಯಾಥೋಲಿಕ್ ಪ್ರೆಸ್ ಅಸೋಸಿಯೇಷನಿನ 29 ನೇ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗಾಂಧೀಜಿಯವರು ನಮಗೆ ಅನ್ಯರ ಅಭಿಪ್ರಾಯಗಳನ್ನು ಗೌರವಿಸುವ ಪರಂಪರೆಯನ್ನು ಪಾಲಿಸಲು ಕರೆ ನೀಡಿದ್ದಾರೆ. ಆ ಕೋರಿಕೆಯಂತೆ ನಾವೆಲ್ಲರೂ ಜವಾಬ್ದಾರಿಯಿಂದ ಮುಂದುವರೆಯಬೇಕೆಂದು ಹಾಗೂ ಗಾಂಧೀಜಿಯವರಂತೆ ಇಂದಿನ ಎಲ್ಲಾ ಪತ್ರಕರ್ತರು ನಿರ್ಭೀತರೂ ಸತ್ಯಪಕ್ಷಪಾತಿಗಳಾಗಬೇಕೆಂದು ಕರೆ ನೀಡಿದರು.
ಮಾಧ್ಯಮಗಳ ಮೂಲಕ ಸತ್ಯದ ಹುಡುಕಾಟ ನಡೆಯುತ್ತಿದೆಯೇ? ಸತ್ಯ ನೋವು ನೀಡುತ್ತದೆ. ಆದರೆ ಅದು ನಿರ್ಗತಿಕರಿಗೆ ಬಲ ನೀಡುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಹೆನ್ರಿ ಡಿಸೋಜಾರವರು ಮಾತನಾಡಿ, ವಿವಿಧ ಒತ್ತಡಗಳ ನಡುವೆ ಸಿಲುಕಿ ಹೋಗಿರುವ ಇಂದಿನ ಮಾಧ್ಯಮ ಜಗತ್ತಿನಲ್ಲಿ ಗಾಂಧೀಜಿಯವರ ಚಿಂತನೆಗಳು ಅಪ್ರಸ್ತುತ ಎನ್ನುವಂತೆ ಕಾಣುತ್ತಿದೆಯಾದರೂ ವಾಸ್ತವವಾಗಿ ಬೆಳಕಿನ ಅಗತ್ಯವಿರುವುದು ಕತ್ತಲಿನ ನಡುವೆಯೇ ಎನ್ನುವುದನ್ನು ಮರೆಯಬಾರದು. ಇಂತಹ ಗೊಂದಲದ ನಡುವೆಯೇ ಪ್ರಜಾತಂತ್ರದ ಹಾಗೂ ಭಾರತೀಯತೆಯ ಬಲವನ್ನು ಹೆಚ್ಚಿಸಲು ಮಾಧ್ಯಮಗಳ ಪಾತ್ರದ ಕುರಿತು ಗಾಂಧೀಜಿಯವರ ಚಿಂತನೆಗಳನ್ನು ಪುನಃ ನಮ್ಮ ಪತ್ರಿಕೋದ್ಯಮದ ಕೇಂದ್ರ ಭಾಗವಾಗಿಸುವ ಅಗತ್ಯವಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಮಾವೇಶದ ಉದ್ಘಾಟಕರಾಗಿ ಉಪಸ್ಥಿತರಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುಗಳಾದ ಬಹು ವಂದನೀಯ ಮ್ಯಾಕ್ಸಿಮ್ ಎಲ್. ನರೊನ್ಹಾ, ಐಸಿಪಿಎ ಅಧ್ಯಕ್ಷರಾದ ಇಗ್ನೇಷಿಯಸ್ ಗೊನ್ಸಾಲ್ವಿಸ್, ಕಾರ್ಯದರ್ಶಿ ಫಾ. ಸುರೇಶ್ ಮ್ಯಾಥ್ಯೂ, ಕಾರ್ಯಕ್ರಮದ ಸಂಯೋಜಕರಾದ ರಾಕ್ಣೊ ವಾರಪತ್ರಿಕೆಯ ಸಂಪಾದಕರಾದ ವಂದನೀಯ ಫಾದರ್ ರೂಪೇಶ್ ಮಾಡ್ತಾ, ಸಿಒಡಿಪಿ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜಾ ವೇದಿಕೆಯಲ್ಲಿ ಹಾಜರಿದ್ದರು. ದೇಶದ ವಿವಿಧ ರಾಜ್ಯಗಳ ಪತ್ರಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು