3:58 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು