9:11 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು