5:51 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು