2:28 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಗಾಂಧೀಜಿಯನ್ನೇ ನಾವು ಬಿಟ್ಟಿಲ್ಲ ಸ್ವಾಮಿ, ಇನ್ನು ನಿಮ್ಮನ್ನು ಬಿಡುತ್ತೇವೆಯೇ: ಬಿಜೆಪಿ ನಾಯಕರಿಗೆ ಹಿಂದೂ ಮಹಾಸಭಾ ಪ್ರಶ್ನೆ

18/09/2021, 18:23

ಮಂಗಳೂರು(reporterkarnataka.com): ಮೈಸೂರಿನಲ್ಲಿ 800 ವರ್ಷ ಪುರಾತನವಾದ ದೇಗುಲವನ್ನು ಧ್ವಂಸ ಮಾಡಿರುವ ಕುರಿತು ಗರಂ ಆಗಿರುವ ಅಖಿಲ ಭಾರತ ಹಿಂದೂ ಮಹಾಸಭಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ಗಾಂಧೀಜಿಯವರನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವೆಯೇ ಎಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಪ್ರಶ್ನಿಸಿದೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಮಾತನಾಡಿ, ಹಿಂದೂ ವಿರೋಧಿಯಾಗಿದ್ದರು ಎಂಬ ಕಾರಣಕ್ಕೆ ಗಾಂಧೀಜಿಯವರನ್ನೇ ಬಿಟ್ಟಿಲ್ಲ ಸ್ವಾಮಿ, ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡುತ್ತೇವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸಿ ಪ್ರಶ್ನಿಸಿದರು.

ಬಿಜೆಪಿ ನಾಯಕರು ನಮ್ಮಿಂದ ಒಂದು ಸಣ್ಣ ತಪ್ಪಾಗಿದೆ. ಅದೇ ಜಾಗದಲ್ಲಿ ಮತ್ತೆ ದೇಗುಲ ಕಟ್ಟಿಕೊಡುತ್ತೇವೆ ಎಂದು ಹೇಳಿದ್ದಾರೆ. 800 ವರ್ಷ ಪುರಾತನವಾದ ದೇಗುಲ ಕೆಡವಿರುವುದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು?  ದೇಶವನ್ನು ಮಾರಿ ಬಿಡುವುದೇ? ಯಾವುದೇ ಸಚಿವರಾಗಲಿ, ಶಾಸಕರು- ಸಂಸದರಾಗಲಿ ಇಂತಹ ಬಾಲಿಶ ಹೇಳಿಕೆ ನೀಡಬಾರದು. ದೇಗುಲ ಮತ್ತೆ ನಿರ್ಮಿಸಿಕೊಡುವುದು ಎಂದರೆ ಜನರ ತೆರಿಗೆ ಹಣದಿಂದ ಸರಕಾರಿ ದುಡ್ಡಿನಲ್ಲಿ ಕಟ್ಟಿಕೊಡುವುದು ಬೇಡ. ಬದಲಿಗೆ ದೇಗುಲ ಧ್ವಂಸಕ್ಕೆ ಯಾರು ಕಾರಣಕರ್ತರಾಗಿದ್ದಾರೆಯೋ ಅವರ ಆಸ್ತಿ ಮಾರಿ ದೇವಸ್ಥಾನ ಕಟ್ಟಿ ಕೊಡಲಿ ಎಂದು ಅವರು ನುಡಿದರು.

ಬಿಜೆಪಿ ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರ ಓಲೈಕೆ ಮಾಡಲು ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಿದೆ. ಸಂಘ ಪರಿವಾರಕ್ಕೆ ಹಾಗೂ ಬಿಜೆಪಿ ಸಹ ಪರಿವಾರಕ್ಕೆ ದಮ್ಮು ಇದ್ದರೆ ಅದು ಹಿಂದೂ ಮಹಾಸಭಾವನ್ನು ಬೆಂಬಲಿಸಬೇಕು ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು