9:46 PM Sunday20 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ…

ಇತ್ತೀಚಿನ ಸುದ್ದಿ

ಗಾಂಧೀಜಿ ವಿಚಾರಧಾರೆ ಕಡೆಗಣಿಸಿ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯವಿಲ್ಲ: ಬಿ.ಕೆ. ಇಮ್ತಿಯಾಝ್

03/10/2022, 14:28

ಮಂಗಳೂರು(reporterkarnataka.com): ಅಹಿಂಸೆ ಅಥವಾ ಸಂಪೂರ್ಣ ಅಹಿಂಸೆಯ ಮೇಲೆ ದೃಢವಾಗಿ ರೂಪಿಸಲ್ಪಟ್ಟ ಸಾಮೂಹಿಕ ಅವಿಧೇಯತೆಯ ಮೂಲಕ ದಬ್ಬಾಳಿಕೆಗೆ ಪ್ರತಿರೋಧವನ್ನು ಒಡ್ಡುವ ಸತ್ಯಾಗ್ರಹದ ಪರಿಕಲ್ಪನೆಗೆ ಜಗತ್ತಿಗೆ ದಾರಿ ತೋರಿಸಿದವರು. ಮಹಾತ್ಮ ಗಾಂಧೀಜಿಯವರು ಅದೇ ಅಹಿಂಸಾತ್ಮಕ ಹೋರಾಟವೇ ಭಾರತವನ್ನು ಸ್ವಾತಂತ್ರ್ಯದತ್ತ ತಂದು ನಿಲ್ಲಿಸಿತು ಹಾಗೂ ಜಗತ್ತಿನ ವಿವಿಧ ದೇಶಗಳಲ್ಲಿ ನಾಗರಿಕ ಹಕ್ಕುಗಳ ಮತ್ತು ಸ್ವಾತಂತ್ರ್ಯ ಆಂದೋಲನ ಗಳಿಗೆ ಸ್ಫೂರ್ತಿ ನೀಡಿತು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿಕೆ ಇಮ್ತಿಯಾಝ್ ಹೇಳಿದರು.

ಅವರು ನಗರದ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯ ವಿಚಾರಗಳನ್ನು ಕಡೆಗಣಿಸಿ ಭಾರತವನ್ನು ಸದೃಢವಾಗಿ ಕಟ್ಟುವುದು ಸಾಧ್ಯವಿಲ್ಲ. ಭಾರತದ ಬಹುತ್ವ ಮತ್ತು ಸಮಾನತೆ,ಏಕತೆಯನ್ನು ಉಳಿಸಲು ಗಾಂಧೀ ತತ್ವ ಅನುಕರಣೀಯ ಎಂದು ಅವರು ಹೇಳಿದರು.

ಸಂಘದ ಉಪಾಧ್ಯಕ್ಷರಾದ ಸಂತೋಷ್ ಆರ್.ಎಸ್. ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಮುಖರಾದ ಅಸೀಫ್ ಬಾವ, ರಿಯಾಜ್, ಆದಂ ಬಜಾಲ್, ಮನ್ಸೂರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿ, ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು