8:38 PM Monday30 - March 2026
ಬ್ರೇಕಿಂಗ್ ನ್ಯೂಸ್
ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು