1:23 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು