11:28 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು