9:27 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು