5:44 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗಣೇಶ ಚತುರ್ಥಿ ರಜೆ ಗೊಂದಲ: ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟ ಮುಖ್ಯಮಂತ್ರಿ

16/09/2023, 15:28

ಮಂಗಳೂರು(reporterkarnataka.com): ಗಣೇಶ ಚತುರ್ಥಿಯ ರಜೆ ಕುರಿತು ಕರಾವಳಿಯ ದಕ್ಷಿಣ ಕನ್ನಡದ ಜನರಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗೆ ಸ್ವತಃ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಅವರು
ಮುಖ್ಯಮಂತ್ರಿ ಜತೆ ಚರ್ಚಿಸಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸೂಚನೆ ನೀಡಿದ್ದಾರೆ.
ರಜೆ ಗೊಂದಲ ಕುರಿತು ಖಾದರ್ ಹಾಗೂ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಅವರು ಕೂಡ ಉನ್ನತ ಅಧಿಕಾರಿಗಳ ಜತೆ ಚರ್ಚಿಸಿ
ರಜೆಯ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯವರ ವಿವೇಚನಗೆ ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ರಜೆ ಗೊಂದಲ ಸೃಷ್ಟಿಯಾಗಿದೆ. ಅದು ಕೂಡ ದ.ಕ. ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಉದ್ಭವಿಸಿದೆ.
ಗಣೇಶ ಹಬ್ಬಕ್ಕೆ ಸೆಪ್ಟೆಂಬರ್ 18ರ ಬದಲು ಸೆಪ್ಟೆಂಬರ್ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಬಹುತೇಕ ಖಚಿತವಾಗಿದೆ. ಇಂದು ಅಥವಾ ನಾಳೆ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು