1:16 AM Monday16 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ… ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು