11:25 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು