1:51 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು